ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಿ.ವಿ.ವಿ ಸಂಘದ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ (ಬಿಮ್ಸ್) ಮಹಾವಿದ್ಯಾಲಯದ ಸಭಾಭವನದಲ್ಲಿ ಜರುಗಿದ ಎಂಬಿಎ ವಿದ್ಯಾರ್ಥಿಗಳ ಪ್ಲೇಸ್ಮೆಂಟ್ ಸಕ್ಸಸ್ಮೀಟ್ - 2025 ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವಿತರಿಸಿ ಮಾತನಾಡಿದರು.
ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ ಲೆಕ್ಕವಿಲ್ಲದಷ್ಟು ಸಂಶೋಧನೆ ಮಾಡಬಹುದಾದ ಅನೇಕ ವಿಷಯಗಳಿವೆ.ಅವುಗಳಲ್ಲಿ ಸಂಸ್ಥೆಗಳ ನಡವಳಿಕೆ, ನೌಕರರ ಧಾರಣ, ಭಾವನಾತ್ಮಕ ಬುದ್ಧಿವಂತಿಕೆ, ಕಾರ್ಯಪಡೆ ವೈವಿಧ್ಯತೆ, ಉದ್ಯೋಗಿ ಕಾರ್ಯಕ್ಷಮತೆ, ಗ್ರಾಹಕ ನಡವಳಿಕೆ, ಉದ್ಯೋಗಿ ಸಂಬಂಧ, ಸೇರಿದಂತೆ ಭಾವನಾತ್ಮಕ ಬುದ್ಧಿವಂತಿಕೆಯ ಕುರಿತು ಸಂಶೋಧನೆ ಅಗತ್ಯವಿದ್ದು, ವೃತ್ತಿಪರ ಹಾಗೂ ಔದ್ಯೋಗಿಕಕ್ಷೇತ್ರದಲ್ಲಿ ಕೌಶಲ್ಯದ ಜೊತಗೆ ನಮ್ಮ ಉತ್ತಮ ವ್ಯಕ್ತಿತ್ವ ನಡುವಳಿಕೆಗಳು ಮುಖ್ಯವಾಗುತ್ತದೆ, ಇವುಗಳು ಸಂದರ್ಶನಲ್ಲಿ ಮುಖ್ಯ ಪಾತ್ರವಹಿಸುತ್ತವೆ ಎಂದರು.ಅತಿಥಿಗಳಾದ ಆರ್.ಡಿ.ಎಫ್ & ಬಿಇಸಿ - ಎಸ್ಟಿಇಪಿ ಕಾರ್ಯನಿರ್ವಾಹಕ ರ್ದೇಶಕರಾದ ಡಾ. ಬಿ.ಎಸ್. ಅಂಗಡಿ ಹಾಗೂ ರೆಂಟೋಕಿಲ್ನ ಸೀನಿಯರ್ ಎಕ್ಸಿಕ್ಯೂಟಿವ್ ಅಕ್ಷಯ ಭಟ್ ಮಾತನಾಡಿ, ಪ್ಲೇಸ್ಮೆಂಟ್ ಸಕ್ಸಸ್ ಒಂದು ಸಾರ್ಥಕ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ಹಾಗೂ ಪಾಲಕರ ಕನಸಾಗಿದೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಜೊತೆಗೆ ಉದ್ಯೋಗ ಒದಗಿಸುತ್ತಿರುವ ಮಹಾವಿದ್ಯಾಲಯದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ನಿರ್ದೇಶಕ ಡಾ. ಪ್ರಕಾಶ್ ಕೆ. ವಡವಡಗಿ ಮಾತನಾಡಿ, ಬಾಗಲಕೋಟೆಯ ಪ್ರತಿಭೆಗಳು ಜಾಗತಿಕ ಕಂಪನಿಗಳ ಗಮನ ಸೆಳೆದಿರುವುದು ಸಂಸ್ಥೆಯ ಶಿಕ್ಷಣ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹಾಗೂ ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿಯವರ ಆಶಯದಂತೆ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಸೌಲಭ್ಯ ನೀಡಲಾಗಿದೆ ಎಂದು ಹೇಳಿದರು.
ಪ್ರಮಾಣ ಪತ್ರ ವಿತರಣೆ :