ಕನ್ನಡಪ್ರಭ ವಾರ್ತೆ ಮೈಸೂರು
ಕನಕದಾಸನಗರದ ವಿಶ್ವಪ್ರಜ್ಞ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಇತರರಿಗಿಂತ ಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಇದ್ದಲ್ಲಿ ಸಾಧನೆ ಮಾಡಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳು ಕೇವಲ ಪ್ರದರ್ಶನ ಮಾಡುವುದಕ್ಕಿಂತ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಕಲಿಕೆಯ ಬಗ್ಗೆ ಆಸಕ್ತಿ ಇದ್ದರೆ ಸಾಕು, ಬುದ್ಧಿವಂತಿಕೆ ತಾನೆತಾನಾಗಿ ಬರುತ್ತದೆ. ವಿದ್ಯಾರ್ಥಿಗಳು ವೇಳಾಪಟ್ಟಿ ಸಿದ್ದಪಡಿಸಿಕೊಂಡು ಓದಬೇಕು. ಸಂವಹನ ಕೌಶಲ್ಯ ಬೆಳೆಸಿಕೊಳ್ಳಬೇಕು. ಅಂಕ ಗಳಿಕೆ ಜೊತೆಗೆ ಕೌಶಲ್ಯವಿದ್ದಲ್ಲಿ ಮಾತ್ರ ತಾವು ಅಂದುಕೊಂಡು ಗುರಿ ತಲುಪಬಹುದು ಎಂದು ಹೇಳಿದರು.ಗಾಯಕ ನಿಶ್ಚಯ್ ಜೈನ್ ಮಾತನಾಡಿ, ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ. ಗುರುಗಳ ಪ್ರತಿ ಸಲಹೆಯನ್ನು ಒಂದೊಂದು ಮೆಟ್ಟಿಲು ಮಾಡಿಕೊಂಡು ಮೇಲೆ ಬನ್ನಿ ಎಂದು ಸಲಹೆ ಮಾಡಿದರು
ಶೈಕ್ಷಣಿಕ ನಿರ್ದೇಶಕ ವೈಭವ್ ವಿ ಬಾಡಕರ ಮಾತನಾಡಿ, ಇತರರಿಗಿಂತ ನಿಮ್ಮ ಉತ್ತರಗಳು ಭಿನ್ನವಾಗಿರಬೇಕು. ಸ್ಪುಟವಾಗಿರಬೇಕು. ಆಗ ಮಾತ್ರ ಸಾಧಿಸಿ ತೋರಿಸಬಹುದು. ಪರಿಸರ ಹಾಗೂ ಆಧ್ಯಾತ್ಮಿಕತೆಗೆ ಒತ್ತು ನೀಡಿ, ಇತರಗಿಂತ ಭಿನ್ನವಾಗಿ ಚಿತ್ರಿಸಿದ್ದರಿಂದಲೇ ''''''''ಕಾಂತಾರ'''''''' ಸಿನಿಮಾ ಯಶಸ್ವಿಯಾಯಿತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮರ್ಥ ಜ್ಞಾನಾಶ್ರಯ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಎಚ್.ಸಿ. ಸುನಿಲ್ ರಾಜ್, ಆಡಳಿತಾಧಿಕಾರಿ ಎಂ.ಆರ್. ಸುಧೀಂದ್ರ, ಪ್ರಾಂಶುಪಾಲ ಆರ್.ವಿ. ಮನೋಹರ ಬಾಬು ಉಪಸ್ಥಿತರಿದ್ದರು. ಲಕ್ಷ್ಮೀ ಮತ್ತು ಮೋನಿಷಾ ಪ್ರಾರ್ಥಿಸಿ, ಸ್ಫೂರ್ತಿ ಸ್ವಾಗತಿಸಿ, ಎಲ್.ಎಸ್. ಸುಬ್ಬಲಕ್ಷ್ಮಿ, ಎ.ರೋಹಿಣಿ, ಆರ್. ಸಮರ್ಥ್ ಅತಿಥಿಗಳನ್ನು ಪರಿಚಯಿಸಿದರು. ವೈ.ಚೈತನ್ಯಾ ವಂದಿಸಿದರು. ಎಂ. ಸಿಂಚನಾ ಹಾಗೂ ಮಿಥುನ್ ಎಸ್. ಗೌಡ ಕಾರ್ಯಕ್ರಮ ನಿರೂಪಿಸಿದರು.
ಹಾಡಿ ರಂಜಿಸಿದ ನಿಶ್ಚಯ್ ಜೈನ್