ಯಲ್ಲಾಪುರ: ಉತ್ತಮ ಮಾನವ ಸಂಪನ್ಮೂಲ ಸೃಜಿಸಲು ಉತ್ತಮ ಕೌಶಲ್ಯದ ಅಗತ್ಯವಿದೆ ಎಂದು ಶಿಕ್ಷಣ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಮಧ್ಯ ಕರ್ನಾಟಕ ಮೇಲ್ವಿಚಾರಕ ಶಂಭುಲಿಂಗ ನಡುವಿನಮನಿ ಅಭಿಪ್ರಾಯಪಟ್ಟರು.
ನಮ್ಮೊಳಗಿನ ನಾಯಕತ್ವದ ಗುಣದಿಂದ ಸಮಾಜಕ್ಕೆ ಸಾರ್ಥಕ ಕೊಡುಗೆ ನೀಡಲು ಸಾಧ್ಯ. ನಾವು ಬೆಳೆಯುವ ಜತೆಗೆ ನಮ್ಮವರನ್ನೂ ಬೆಳೆಸಿದಾಗ ಸಾಮಾಜಿಕ ಪರಿಕಲ್ಪನೆಗೆ ಒಂದು ಅರ್ಥ ಬಂದೀತು ಎಂದರು.
ಜಿಲ್ಲಾ ಸಂಯೋಜಕ ಪ್ರಕಾಶ ಹಾಲಪ್ಪನವರ್ ಮಾತನಾಡಿ, ನಾವು ಮಾಡುವ ಕೆಲಸದಲ್ಲಿ ಕಾರ್ಯಕ್ಷಮತೆ ಇದ್ದರೆ ಅದು ಹೆಚ್ಚು ಪರಿಣಾಮಕಾರಿ ಆಗಬಲ್ಲದು. ಒತ್ತಡದಿಂದ ಕೆಲಸ ನಿರ್ವಹಿಸಬಾರದು. ತರಬೇತಿಯಿಂದ ಬೌದ್ಧಿಕ ಜ್ಞಾನ ಪಡೆದರೆ ನಮ್ಮಲ್ಲಿರುವ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಸಹಾಯಕವಾಗಬಲ್ಲದು ಎಂದರು.ತರಬೇತಿಯಲ್ಲಿ ಕೃತಕ ಬುದ್ಧಿಮತ್ತೆ ಕುರಿತು ಎಐ ತರಬೇತುದಾರ ಶಿವಯ್ಯ ಗೊಡಮನಿ ಮಾಹಿತಿ ನೀಡಿದರು. ಶಿಕ್ಷಣ ಫೌಂಡೇಶನ್ ಡಿಜಿ ವಿಕಸನದ, ಜಿಲ್ಲಾ ಸಂಯೋಜಕ ಈಶ್ವರ ಬರಿಗಲ್, ಯಲ್ಲಪ್ಪ ಉಪಸ್ಥಿತರಿದ್ದರು.ಹಸು ಮೇಲೆ ಅಪರಿಚಿತರಿಂದ ಹಲ್ಲೆ
ಹೊನ್ನಾವರ: ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ಶುಕ್ರವಾರ ಅಪಘಾತದಲ್ಲಿ ಶಿಲೆಕಲ್ಲು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಗುದ್ದಿ ಪಲ್ಟಿಯಾಗಿದೆ.ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿದೆ. ಶಿಲೆಕಲ್ಲು ತುಂಬಿದ ಲಾರಿ ಶಿವಮೊಗ್ಗದಿಂದ ಬಂದಿದ್ದು, ಮುರ್ಡೆಶ್ವರದ ದೇವಾಲಯಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಚಾಲಕ ಹಾಗೂ ಕ್ಲೀನರ್ನನ್ನು ಚಿಕಿತ್ಸೆಗೆ ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.