ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಪಕ್ಷಗಳಿಗೆ ಸಮರ್ಥ ಅಭ್ಯರ್ಥಿ ಸಿಗುತ್ತಿಲ್ಲ. ಹೀಗಾಗಿ ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ಬಾಲಕೃಷ್ಣರವರನ್ನು ಅವಹೇಳನ ಮಾಡಿದರೆ ಪ್ರಚಾರಕ್ಕೆ ಬರುತ್ತೇನೆ. ಆಗ ವರಿಷ್ಠರು ತನ್ನನ್ನು ಗುರುತಿಸುತ್ತಾರೆಂದು ಮಾಜಿ ಶಾಸಕ ಎ.ಮಂಜುನಾಥ್ ಹಗಲುಗನಸು ಕಾಣುತ್ತಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಯರೇಹಳ್ಳಿ ಮಂಜು ವಾಗ್ದಾಳಿ ನಡೆಸಿದರು.
ಕೂರಿಸಿದ್ದಾರೆ. ನನಗೆ ಅಧಿಕಾರ ದೊರಕಿಸಿಕೊಡಲು ಅವರು ಸ್ವಂತ ಹಣ ಖರ್ಚು ಮಾಡಿದ್ದಾರೆ. ನನ್ನಂತಹ ಹತ್ತಾರು ಯುವಕರಿಗೆ ಅಧಿಕಾರ ಕೊಡಿಸುವಲ್ಲಿ ಬಾಲಕೃಷ್ಣರವರು ಮುಂಚೂಣಿಯಲ್ಲಿದ್ದಾರೆ ಎಂದು ಹೇಳಿದರು.
ಬಾಲಕೃಷ್ಣರವರ ಜೊತೆಗೆ ನಮ್ಮೆಲ್ಲರ ಒಡನಾಟ ಚೆನ್ನಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಅಭಿವೃದ್ಧಿಯತ್ತ ಗಮನ ಹರಿಸುವಂತೆ ಸಲಹೆ ನೀಡುತ್ತಾರೆ. ಅದೇ ರೀತಿ ಮಂಜುನಾಥ್ ಅವರು ಅಪಪ್ರಚಾರ ಮಾಡುವುದನ್ನು ಬಿಡಬೇಕು. ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಬರುವುದಾದರೆ ನಾವು ಸಿದ್ಧರಾಗಿದ್ದೇವೆ. ಬಾಲಿಷ ಹೇಳಿಕೆ ನೀಡುವುದನ್ನು ಮುಂದುವರೆಸಿದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಸುರೇಶ್ ಮತ್ತು ಬಾಲಕೃಷ್ಣ ಜೋಡೆತ್ತಿನಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಬ್ಬರ ನಡುವೆ ತಂದಿಕ್ಕುವ ಕೆಲಸ ಮಾಡುವುದು ಬೇಡ. ನೀವು ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಯಾರು ಕಾರಣ ಎಂಬುದೆಲ್ಲ ಗೊತ್ತಿದೆ. ನಮ್ಮ ಮನೆ ಸಮಸ್ಯೆಯನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದು ಯರೇಹಳ್ಳಿ ಮಂಜು ಟಾಂಗ್ ನೀಡಿದರು.ತಾಪಂ ಮಾಜಿ ಅಧ್ಯಕ್ಷ ಜಗದೀಶ್ ಮಾತನಾಡಿ, ಬಾಲಕೃಷ್ಣರವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಬೇಡ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಡೆದು ತೋರಿಸಲೆಂದು ಮಾಜಿ ಶಾಸಕರು ಸವಾಲು ಹಾಕಿದ್ದರು. ಈಗ ಬಾಲಕೃಷ್ಣ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದು, ಈಗೇನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿರುವ 224 ಶಾಸಕರ ಪೈಕಿ ಬಾಲಕೃಷ್ಣರವರು ಸೂಪರ್ ಎಂಎಲ್ ಎ ಆಗಿದ್ದಾರೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ, ಅಭಿವೃದ್ಧಿ ಮಾಡುತ್ತಿದ್ದಾರೆ. ಇದನ್ನು ಸಹಿಸದ ನೀವು ಅಸೂಯೆ ಪಡುತ್ತಿದ್ದೀರಾ ಎಂದು ಆರೋಪಿಸಿದರು.
ಕೋಟ್ ...
- ಅರೇಹಳ್ಳಿ ಗಂಗಾಧರ್ ಗೌಡ, ಸದಸ್ಯರು, ಕೂಟಗಲ್ ಗ್ರಾಪಂ17ಕೆಆರ್ ಎಂಎನ್ 5.ಜೆಪಿಜಿ