ಅಂಬೇಡ್ಕರ ನಾಮಫಲಕಕ್ಕೆ ಚಪ್ಪಲಿ: ಆರೋಪಿಗಳ ಬಂಧನಕ್ಕೆ ಪ್ರತಿಭಟನೆ

KannadaprabhaNewsNetwork |  
Published : Mar 03, 2026, 02:15 AM IST
ನಾಮಫಲಕಕ್ಕೆ ಚಪ್ಪಲಿ ಹಾಕಿರುವುದು. | Kannada Prabha

ಸಾರಾಂಶ

ಪ್ರತಿಭಟನಾನಿರತ ಮುಖಂಡರು ಮಾತನಾಡಿ, ದೇಶದಲ್ಲಿ ಎಲ್ಲರೂ ಸಮಾನರು ಎಂದು ಸಂವಿಧಾನ ನೀಡಿದ ಭಾರತದ ಭಾಗ್ಯವಿಧಾತ ಇರುವ ನಾಮಫಲಕಕ್ಕೆ ಚಪ್ಪಲಿ ಹಾಕುವ ಮೂಲಕ ಅವಮಾನ ಮಾಡಿದ್ದಾರೆ. ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದರು.

ಗಜೇಂದ್ರಗಡ: ತಾಲೂಕಿನ ಗುಳಗುಳಿ ಗ್ರಾಮದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ ಹೆಸರಿನ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾಕಿದ ಘಟನೆ ಜರುಗಿದ್ದು, ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ ಮುಖಂಡರು ಮಾತನಾಡಿ, ದೇಶದಲ್ಲಿ ಎಲ್ಲರೂ ಸಮಾನರು ಎಂದು ಸಂವಿಧಾನ ನೀಡಿದ ಭಾರತದ ಭಾಗ್ಯವಿಧಾತ ಇರುವ ನಾಮಫಲಕಕ್ಕೆ ಚಪ್ಪಲಿ ಹಾಕುವ ಮೂಲಕ ಅವಮಾನ ಮಾಡಿದ್ದಾರೆ. ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕ್ಕೆ ಮುಂದಾಗಬೇಕು. ಇಂತಹ ಘಟನೆಗಳು ಪುನರಾವರ್ತನೆ ಆಗಬಾರದು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ, ನರಗುಂದ ಉಪವಿಭಾಗದ ಉಪಾಧೀಕ್ಷಕ ಪ್ರಭುಗೌಡ ಕಿರೇದಳ್ಳಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿಡಿ, ರೋಣ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಆಲೂರ, ಸಿಪಿಐ ವಿಜಯಕುಮಾರ ಸೇರಿ ಇತರ ಅಧಿಕಾರಿಗಳು ಸಮುದಾಯದ ಮುಖಂಡರೊಂದಿಗೆ ಚರ್ಚಿಸಿದರು.

ಬಳಿಕ ಅಧಿಕಾರಿಗಳು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಹಿನ್ನೆಲೆ ಪ್ರತಿಭಟನೆಯನ್ನು ಮೊಟಕುಗೊಳಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ ಅವರ ನಾಮಫಲಕಕ್ಕೆ ತಹಸೀಲ್ದಾರ್ ಸೇರಿ ಅಧಿಕಾರಿಗಳು ಹಾಗೂ ಮುಖಂಡರು ಪೂಜೆ ಸಲ್ಲಿಸಿದರು.ಮುಖಂಡರಾದ ಡಿ.ಜಿ. ಕಟ್ಟಿಮನಿ, ಮಂಜುನಾಥ ಬುರಡಿ, ದುರಗೇಶ ಹಿರೇಮನಿ, ಈಶ್ವರ ದೊಡ್ಡಮನಿ, ಸುರೇಶ ದಾರಿಮನಿ, ಶಿವಲಿಂಗಪ್ಪ ದೊಡ್ಡಮನಿ, ಯಮನೂರಪ್ಪ ದಾರಿಮನಿ, ನಾಗರಾಜ ದೊಡ್ಡಮನಿ, ಬಸವರಾಜ ಕಡಬಿನ, ಶರಣು ಅರಳಿಗಿಡದ, ಆನಂದ ಮಾದರ, ರಾಚಯ್ಯ ಬಾಳಿಕಾಯಿಮಠ, ಪುಂಡಲಿಕ ಮಾದರ, ಬಸವರಾಜ ಹಾದಿಮನಿ, ಯಮನಪ್ಪ ಹರಿಜನ, ಯಮನೂರ ಅಬ್ಬಿಗೇರಿ, ಲಕ್ಷ್ಮಣ ಲಕ್ಕಲಕಟ್ಟಿ, ಹನುಮಂತ ದಾರಿಮನಿ, ವಾಸಪ್ಪ ಪೂಜಾರ, ರಾಮಪ್ಪ ದಾರಿಮನಿ ಇತರರು ಇದ್ದರು.

ಬಂಧಿಸಲು ಸೂಚನೆ: ತಾಲೂಕಿನ ಗುಳಗುಳಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಮುದಾಯದ ಮುಖಂಡರೊಂದಿಗೆ ಚರ್ಚಿಸಲಾಗಿದೆ. ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಲು ಡಿವೈಎಸ್‌ಪಿ ಹಾಗೂ ಸಿಪಿಐ ಅವರಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನವ ಧರ್ಮದ ಶ್ರೇಷ್ಠತೆ ಸಾರಿದ ರೇಣುಕಾಚಾರ್ಯರು: ಟಿ.ಎಂ. ಶಿವಕುಮಾರ್
ಮಾ. 3ರಂದು ಕುರುಗೋಡು ದೊಡ್ಡ ಬಸವೇಶ್ವರ ಮಹಾ ರಥೋತ್ಸವ