ಎಸ್ಐಆರ್ ವಿರುದ್ಧ ಸ್ಲಂ ಜನಾಂದೋಲನ ಸಂಘಟನೆ ಆಕ್ರೋಶ

KannadaprabhaNewsNetwork |  
Published : Feb 12, 2026, 01:30 AM IST
10ಕೆಡಿವಿಜಿ5-ದಾವಣಗೆರೆ ಡಿಸಿ ಕಚೇರಿ ಬಳಿ ಬುಧವಾರ ಎಸ್ಐಆರ್‌ ಕರಾಳ ಕಾಯ್ದೆ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ಪ್ರತಿಭಟಿಸಲಾಯಿತು. | Kannada Prabha

ಸಾರಾಂಶ

ಎಸ್ಐಆರ್‌ ಕರಾಳ ಕಾಯ್ದೆ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಎಸ್ಐಆರ್‌ ಕರಾಳ ಕಾಯ್ದೆ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಉಭಯ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರ ನೇತೃತ್ವದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು, ಸಾರ್ವಜನಿಕರು ಎಸ್ಐಆರ್‌ ಕರಾಳ ಕಾಯ್ದೆ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತದ ಮುಖಾಂಡರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.

ಇದೇ ವೇಳೆ ಮಾತನಾಡಿದ ಸಂಘಟನೆ ಗೌರವಾಧ್ಯಕ್ಷ ಎಸ್.ಎಲ್.ಆನಂದಪ್ಪ, ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ, ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಕಸಿಯುವ ಕೇಂದ್ರ ಸರ್ಕಾರದ ಹುನ್ನಾರವಾದ ಕರಾಳ ಎಸ್‌ಐಆರ್‌ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಇಂತಹ ಕಾಯ್ದೆ ಜಾರಿಗೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎಂದರು.

ದೇಶದಲ್ಲಿ ಚುನಾವಣಾ ಆಯೋಗದಿಂದ ಮೊದಲ ಹಂತದಲ್ಲಿ 12 ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಎಸ್‌ಐಆರ್ ಮ್ಯಾಪಿಂಗ್ ಕೈಗೊಂಡಿದೆ. ಇದರ ವಿರುದ್ಧ ಎಲ್ಲಾ ರಾಜ್ಯಗಳಲ್ಲೂ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದರೂ ಕೇಂದ್ರ ಸರ್ಕಾರವು ಜನರ ಸಂವಿಧಾನಬದ್ಧ ಮತದಾನದ ಹಕ್ಕು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

ರಾಜ್ಯಾದ್ಯಂತ ಏಕಕಾಲಕ್ಕೆ ಪ್ರತಿಭಟಿಸುವ ಮೂಲಕ ಬಡ ಜನ ವಿರೋಧಿ, ಕಾರ್ಮಿಕ ವಿರೋಧಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳೆಯರ ವಿರೋಧಿಯಾದ ಕರಾಳ ಎಸ್ಐಆರ್‌ ಕಾಯ್ದೆಯನ್ನು ಕೈಬಿಡುವಂತೆ ಹಾಗೂ ಇಂತಹ ಮಾರಕ ಕಾಯ್ದೆ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಬೇಕು. ಚುನಾವಣೆ ಆಯೋಗವು ತನ್ನ ಸಾಂವಿಧಾನಿಕ ಜವಾಬ್ದಾರಿ ಬಿಟ್ಟು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಬಿಹಾರದಲ್ಲಿ ಈಚೆಗೆ ಚುನಾವಣಾ ಆಯೋಗವು ಎಸ್ಐಆರ್ ಅಳವಡಿಸಿಕೊಂಡು ಮತದಾರರ ಪಟ್ಟಿ ಸಿದ್ಧಪಡಿಸಿತ್ತು. ಈ ಪ್ರಕ್ರಿಯದಲ್ಲಿ ಬಿಹಾರದ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಕರಡು ವರದಿಯಲ್ಲಿ ತಿಳಿಸಲಾಗಿತ್ತು. ನಂತರ ಇದೇ ಎಸ್ಐಆರ್ ಸಮೀಕ್ಷೆಯಿಂದ ಉತ್ತರ ಪ್ರದೇಶದಲ್ಲಿ ಸುಮಾರು 2.89 ಕೋಟಿ ಅಂದರೆ ಅಲ್ಲಿನ ಶೇ.18.70ರಷ್ಟು ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಲ್ಲಿ ಹೆಚ್ಚಿನದಾಗಿ ಬಡವರು, ದಲಿತರು, ಹಿಂದುಳಿ, ಅಲ್ಪಸಂಖ್ಯಾತರು ಸಂವಿಧಾನಬದ್ಧ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ದೂರಿದರು.

ಎಸ್ಐಆರ್‌ ಪ್ರಕ್ರಿಯೆಯಿಂದ ಕೇವಲ 12 ರಾಜ್ಯಗಳಲ್ಲಿ 7.89 ಕೋಟಿಗೂ ಹೆಚ್ಚು ಮತದಾರರನ್ನು ತೆಗೆದುಹಾಕುವ ಕುತಂತ್ರ ನಡೆಸಲಾಗಿದೆ. ಈಗ ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಎಸ್ಐಆರ್ ಪ್ರಕ್ರಿಯ ಪ್ರಾರಂಭವಾಗಿದೆ. ಲಕ್ಷಾಂತರ ಮತದಾರರು ಪಟ್ಟಿಯಿಂದ ಹೊರ ಬೀಳುವ ಭೀತಿ ಎದುರಾಗಿದೆ. ಮತದಾರರ ಹಕ್ಕನ್ನು ಕಸಿಯುವ ಸಂಚು ಪರಿಷ್ಕರಣೆಯ ಹೆಸರಿನಲ್ಲಿ ನಡೆದಿದೆ. ಒಂದು ಸಮುದಾಯದ ಮತದಾನದ ಹಕ್ಕನ್ನೇ ಕಸಿಯುವ ಹುನ್ನಾರ ಇದಾಗಿದೆ ಎಂದರು.

ಅಧ್ಯಕ್ಷೆ ಪರ್ವೀನ್ ಬಾನು, ಬೀಬಿ ಜಾನ್, ಜಾಕೀರ್ ಸಾಬ್, ರೇಖಾ, ಸುಹೀಲ್ ಭಾಷಾ, ರಜಿಯಾ ಬೀ, ಆರೀಫ್ ಸಾಬ್, ಸಾದಿಕ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ: ಚಲುವರಾಯಸ್ವಾಮಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದೇವೆ