ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನಮ್ಮ ತಾಯಿ ಪಾರ್ವತಮ್ಮ ಶ್ರೀಕಂಠಯ್ಯ ಅವರು ಶಾಸಕಿಯಾಗಿ ಕೆಲಸ ಮಾಡಲು ಅವಕಾಶ ದೊರಕಿತ್ತು. ಆ ವೇಳೆ ಸುಮಾರು 14 ಸಾವಿರ ಆಶ್ರಯ ಮನೆಗಳನ್ನು ಮಂಜೂರು ಮಾಡಿಸಿಕೊಟ್ಟಿದ್ದರು. ಬೆಂಗಳೂರು- ಮೈಸೂರು ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದಜೆಗೇರಿಸಿದ್ದರಿಂದ ಈ ಭಾಗದ ಜನರ ಅಭಿವೃದ್ಧಿಗೆ ವರದಾನವಾಯಿತು. ಜೊತೆಗೆ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಕಾವೇರಿ ಪ್ರಾಧಿಕಾರ ತೆರೆದು, ಅತಿ ಹೆಚ್ಚು ನೀರಾವರಿ ಪ್ರದೇಶವನ್ನಾಗಿ ಮಾರ್ಪಡಿಸುವಲ್ಲಿ ಅವರ ಪಾತ್ರ ಪ್ರಮುಖ ಎಂದು ಸ್ಮರಿಸಿದರು.
ನಮ್ಮ ಕುಟುಂಬದ ಒಡನಾಡಿಯಾಗಿದ್ದ ಎಸ್.ಎಂ. ಕೃಷ್ಣ ಅವರು ನಮ್ಮ ತಾತ ಚುಂಚೇಗೌಡ, ತಂದೆ ಎ.ಸಿ. ಶ್ರೀಕಂಠಯ್ಯ ಹಾಗೂ ತಾಯಿ ಪಾರ್ವತಮ್ಮ ಅವರೊಂದಿಗೆ ಬಾಂಧವ್ಯ ಹೊಂದಿದ್ದರು. ಅಲ್ಲದೆ, ನನ್ನ ರಾಜಕೀಯ ಮಾರ್ಗದರ್ಶಕರಾಗಿದ್ದರು ಎಂದು ಮಾಜಿ ಶಾಸಕರು ನೆನಪಿಸಿಕೊಂಡರು.ಸಂಭಾವಿತ ಹಾಗೂ ವಿನಯವಂತಿಕೆ ರಾಜಕಾರಣಿಯಾಗಿದ್ದ ಎಸ್.ಎಂ.ಕೃಷ್ಣ ಅವರು ಯಾವುದೇ ಹುದ್ದೆಗೆ ಹೋದರೂ ಆ ಹುದ್ದೆಯ ಘನತೆ ಹೆಚ್ಚಾಗುವಂತೆ ಕೆಲಸ ನಿರ್ವಹಿಸುತ್ತಿದ್ದರು. ಮುಖ್ಯಮಂತ್ರಿಗಳಾಗಿ ಈ ರಾಜ್ಯದಲ್ಲಿ ಹಲವು ಮಹತ್ತರ ಯೋಜನೆಗಳನ್ನು ಸಾಕಾರಗೊಳಿಸಿದ್ದರು. ಇಂತಹ ಜಿಲ್ಲೆಯ ಮಗನನ್ನು ಇಂದು ಕಳೆದುಕೊಂಡಿರುವುದು ಜಿಲ್ಲೆ ಮಾತ್ರವಲ್ಲ ಇಡೀ ದೇಶಕ್ಕೇ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀರಂಗಪಟ್ಟಣ:
ಇವರು ೨೦೨೩ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಜನಮೆಚ್ಚಿದ ನಾಯಕರಾಗಿ ಸಮಾಜದ ಸುಧಾರಣೆಗೆ, ಮೂಲಸೌಕರ್ಯಗಳ ಅಭಿವೃದ್ಧಿಗೆ ಬಹಳ ಶ್ರಮವಹಿಸಿದವರು ಎಂದು ಹೇಳಿದರು.