ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕೃಷಿಯತ್ತ ಎಷ್ಟು ಹತ್ತಿರ ಹೋಗುವಿರೋ ಅಷ್ಟು ಲಾಭವಿದೆ. ಯುವಕರು ಕೃಷಿಯ ಕಡೆ ಆಸಕ್ತರಾದಾಗ ಸ್ವಾವಲಂಬಿಗಳಾಗಿ ಜೀವನ ಸಾಗಿಸಬಹುದು. ಜಿಲ್ಲೆಯಲ್ಲಿ ಭತ್ತ, ಕಬ್ಬು, ತೆಂಗು, ರಾಗಿ, ಅಡಕೆ, ತರಕಾರಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಬೆಳೆದ ಕಚ್ಚಾ ಬೆಳೆಯನ್ನು ಮಾರಾಟ ಮಾಡುತ್ತಿದ್ದಾರೆಯೇ ವಿನಃ ಅದನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿಲ್ಲ. ಇದರಿಂದ ವೈಜ್ಞಾನಿಕ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ ಎಂದರು.ಸಾಮಾನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರು ತೊಡಗುವುದಕ್ಕೂ ವ್ಯತ್ಯಾಸವಿದೆ. ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ವಿದ್ಯೆ ಜ್ಞಾನಕ್ಕೆ ದಾರಿಯಾದರೆ ವೃತ್ತಿ ಜೀವನಕ್ಕೆ ದಾರಿಯಾಗಿದೆ. ಒಂದು ಎಕರೆ ಜಮೀನಿನಲ್ಲಿ ಕಡಿಮೆ ಖರ್ಚು, ಕಡಿಮೆ ಅವಧಿ, ಕಡಿಮೆ ನೀರಿನಲ್ಲಿ ಯಾವ ಬೆಳೆ ಬೆಳೆಯಬಹುದೆಂಬ ಬಗ್ಗೆ ವಿಜ್ಞಾನಿಗಳು, ಕೃಷಿ ವಿವಿ ಅಧಿಕಾರಿಗಳಿಂದ ತಿಳಿವಳಿಕೆ ಪಡೆದುಕೊಂಡು ಪ್ರಾಯೋಗಿಕವಾಗಿ ಪ್ರಯತ್ನಿಸಿದರೆ ಅದರಲ್ಲಿರುವ ಲಾಭದ ಅರಿವಾಗುತ್ತದೆ ಎಂದು ಸಲಹೆ ನೀಡಿದರು.
ಮಹಿಳೆಯರಲ್ಲೂ ಉತ್ತಮ ಕೈರುಚಿಯ ಗುಣವಿದೆ. ನೀವು ತಯಾರಿಸುವ ತಾಜಾ ಹಾಗೂ ಉತ್ತಮ ಗುಣಮಟ್ಟದ ಆಹಾರೋತ್ಪನ್ನಗಳನ್ನು ಬ್ರ್ಯಾಂಡ್ ಮಾಡಿದರೆ ಮಾರುಕಟ್ಟೆ ಮುಂದಿಟ್ಟರೆ ಬೇಡಿಕೆ ತನ್ನಿಂತಾನೇ ಸೃಷ್ಟಿಯಾಗುತ್ತದೆ. ಪ್ರಯತ್ನಬಲವನ್ನು ಎಲ್ಲರೂ ರೂಢಿಸಿಕೊಳ್ಳುವ ಅಗತ್ಯವಿದೆ. ಆಸಕ್ತಿಯಿಂದ ಕೃಷಿ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಆಹಾರೋತ್ಪನ್ನಗಳನ್ನು ತಯಾರಿಸಿದರೆ ಮುಂದೆ ಲಾಭದಾಯಕ ಉದ್ಯಮವಾಗಿ ಪರಿವರ್ತಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್, ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥ್, ಜಿಲ್ಲಾಧ್ಯಕ್ಷ ನಾಗರಾಜು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಎನ್.ಜೆ.ರಾಜೇಶ್, ಕಾರಸವಾಡಿ ಮಹದೇವು ಸೇರಿದಂತೆ ಇತರರಿದ್ದರು.ರಾಜ್ಯದಲ್ಲಿ ರಸಗೊಬ್ಬರಕ್ಕೆ ಕೊರತೆ ಇಲ್ಲ, ಆತಂಕ ಬೇಡ- ಚಲುವರಾಯಸ್ವಾಮಿಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕಪಡುವ ಅಗತ್ಯವೂ ಇಲ್ಲ. ರೈತ ಸಂಪರ್ಕ ಕೇಂದ್ರಗಳೆದುರು ಸಾಲುಗಟ್ಟಿ ನಿಲ್ಲಬೇಕಾದ ಅವಶ್ಯಕತೆಯೂ ಇಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು.
ರಸಗೊಬ್ಬರಕ್ಕೆ ಕೊರತೆ ಎದುರಾಗಿರುವುದು ನಿಜ. ಚೈನಾ ಮತ್ತು ಇರಾನ್ನಿಂದ ಪೂರೈಕೆಯಾಗುವ ರಸಗೊಬ್ಬರ ಸ್ಥಗಿತಗೊಂಡಿದೆ. ನಮ್ಮಲ್ಲಿ ಬೇಡಿಕೆಯಷ್ಟು ಉತ್ಪಾದನೆಯಾಗುತ್ತಿಲ್ಲ. ವಿಜ್ಞಾನಿಗಳು ಮತ್ತು ಕೃಷಿ ವಿವಿಗಳು ರಸಗೊಬ್ಬರ ಬಳಕೆ ಮೇಲೆ ನಿಯಂತ್ರಣ ವಿಧಿಸುವಂತೆ ಹೇಳುತ್ತಿವೆ. ಇವೆಲ್ಲದರ ನಡುವೆ ಏಪ್ರಿಲ್ನಿಂದ ಜುಲೈವರೆಗೆ ೬.೮೦ ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೊಡಬೇಕಿತ್ತು. ಕೃಷಿ ಇಲಾಖೆ ೬.೫೫ ಲಕ್ಷ ಟನ್ ಕೊಟ್ಟಿದ್ದೇವೆ. ಇನ್ನೂ ೧.೯೪ ಲಕ್ಷ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ವಿವರಿಸಿದರು.ಈ ಬಾರಿ ಅಣೆಕಟ್ಟೆಗಳು ಬೇಗ ಭರ್ತಿಯಾದವು. ಮುಖ್ಯಮಂತ್ರಿಗಳೂ ನಾಲೆಗಳಿಗೆ ನೀರು ಹರಿಸುವಂತೆ ಆದೇಶಿಸಿದರು. ಜುಲೈನಲ್ಲಿ ನೀರು ಬಿಟ್ಟಿರುವುದರಿಂದ ಸಮಸ್ಯೆ ಎದುರಾಗಿದೆ. ಕೇಂದ್ರದಿಂದ ಯೂರಿಯಾ. ಡಿಎಪಿ ಕಡಿಮೆ ಬರಲಿದೆ ಎಂಬ ಮಾಹಿತಿ ತಿಳಿದು ರೈತರು ಗೊಬ್ಬರ ಖರೀದಿಗೆ ಮುಂದಾಗಿದ್ದಾರೆ. ಮುಂಗಾರು-ಹಿಂಗಾರಿಗೆ ಅಗತ್ಯವಿರುವಷ್ಟು ಗೊಬ್ಬರವನ್ನು ಕೊಡುತ್ತೇವೆ. ಉತ್ತರ ಕರ್ನಾಟಕದಲ್ಲಿ ೫ ಸಾವಿರ ಹೆಕ್ಟೇರ್ ಜೋಳ ಬೆಳೆಯುವ ಪ್ರದೇಶ ಹೆಚ್ಚಿದೆ. ಇದರಿಂದ ಗೊಬ್ಬರಕ್ಕೆ ರೈತರಿಂದ ಒತ್ತಡಡ ಹೆಚ್ಚಿದೆ. ಬಿತ್ತನೆ ಬೀಜ, ರಸಗೊಬ್ಬರವನ್ನು ಅಗತ್ಯವಿರುವಷ್ಟು ಕೊಡಲಿದ್ದೇವೆ. ಸಮಾಧಾನದಿಂದ ಪಡೆಯುವಂತೆ ತಿಳಿಸಿದರು.