ಬಾಗಲಕೋಟೆಮುಧೋಳ ವಲಯ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು 43.2 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಶನಿವಾರ ಜಪ್ತಿ ಮಾಡಿಕೊಂಡಿದೆ.ಮುಧೋಳ ವಲಯ ವ್ಯಾಪ್ತಿಯ ರನ್ನ ಮತ್ತು ಮಾಚಕನೂರು ಸರ್ಕಲ್ ನಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆ ಕಾವಲು ನಡೆಸಿ ಮೂರು ದ್ವಿಚಕ್ರ ವಾಹನಗಳ ಸಮೇತ ಒಟ್ಟು 43.2 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಗಂಗಪ್ಪ ಕರಿಯಪ್ಪ ತಳವಾರ ಬಂಧಿಸಲಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮುಧೋಳ ವಲಯ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು 43.2 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಶನಿವಾರ ಜಪ್ತಿ ಮಾಡಿಕೊಂಡಿದೆ.
ಮುಧೋಳ ವಲಯ ವ್ಯಾಪ್ತಿಯ ರನ್ನ ಮತ್ತು ಮಾಚಕನೂರು ಸರ್ಕಲ್ ನಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆ ಕಾವಲು ನಡೆಸಿ ಮೂರು ದ್ವಿಚಕ್ರ ವಾಹನಗಳ ಸಮೇತ ಒಟ್ಟು 43.2 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಗಂಗಪ್ಪ ಕರಿಯಪ್ಪ ತಳವಾರ ಬಂಧಿಸಲಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಪ್ರತ್ಯೇಕ ಮೂರು ಪ್ರಕರಣ ದಾಖಲಿಸಲಾಗಿದೆ. ಮೂರು ವಾಹನ ಮತ್ತು ಮದ್ಯ ಸೇರಿ ಒಟ್ಟು ₹ 2.36,50 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.