ಪತ್ರಿಕೋದ್ಯಮದಿಂದ ಸಮಾಜ ಜಾಗ್ರತಗೊಳಿಸುವ ಕಾರ್ಯ: ತಿ.ನ. ಶ್ರೀನಿವಾಸ ಸಾಗರ

KannadaprabhaNewsNetwork |  
Published : Mar 31, 2024, 02:06 AM IST
ಸಿದ್ದಾಪುರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿ.ಸುಬ್ರಾಯ ಭಟ್ಟ ಬಕ್ಕಳ ಉದ್ಘಾಟಿಸಿದರು. | Kannada Prabha

ಸಾರಾಂಶ

ದೇಶದಲ್ಲಿ ಇಂದು ಶಾಸಕಾಂಗ ಮತ್ತು ಕಾರ್ಯಾಂಗ ವಿಫಲವಾಗಿದೆ. ನ್ಯಾಯಾಧೀಶರೇ ನ್ಯಾಯಾಂಗದ ಮೇಲೆ ಅನುಮಾನ ವ್ಯಕ್ತಪಡಿಸುವ ಪರಿಸ್ಥಿತಿ ಎದುರಾಗಿದೆ. ವಿರೋಧ ಪಕ್ಷವಾಗಿ, ಅನಧಿಕೃತ ಜನಪ್ರತಿನಿಧಿಯಾಗಿ ಸಮಾಜದ ಸಮಸ್ಯೆಗಳನ್ನು ಗುರುತಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ತಿ.ನ. ಶ್ರೀನಿವಾಸ ಸಾಗರ ಹೇಳಿದರು.

ಸಿದ್ದಾಪುರ: ಪತ್ರಿಕೋದ್ಯಮ ಹಲವಾರು ಸಮಸ್ಯೆಗಳ ನಡುವೆಯೂ ತಲೆ ಎತ್ತಿ ನಿಂತು, ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ತಿ.ನ. ಶ್ರೀನಿವಾಸ ಸಾಗರ ಹೇಳಿದರು.

ಪಟ್ಟಣದ ಲಯನ್ಸ್ ಬಾಲಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ದೇಶದಲ್ಲಿ ಇಂದು ಶಾಸಕಾಂಗ ಮತ್ತು ಕಾರ್ಯಾಂಗ ವಿಫಲವಾಗಿದೆ. ನ್ಯಾಯಾಧೀಶರೇ ನ್ಯಾಯಾಂಗದ ಮೇಲೆ ಅನುಮಾನ ವ್ಯಕ್ತಪಡಿಸುವ ಪರಿಸ್ಥಿತಿ ಎದುರಾಗಿದೆ. ವಿರೋಧ ಪಕ್ಷವಾಗಿ, ಅನಧಿಕೃತ ಜನಪ್ರತಿನಿಧಿಯಾಗಿ ಸಮಾಜದ ಸಮಸ್ಯೆಗಳನ್ನು ಗುರುತಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಆಳುವ ವರ್ಗಕ್ಕೆ ಪತ್ರಕರ್ತರ ಮೇಲೆ ಆರೋಪ ಮಾಡುವ ಯಾವುದೇ ನೈತಿಕತೆ ಇಲ್ಲ. ಪತ್ರಿಕೋದ್ಯಮ ಮತ್ತು ಪತ್ರಕರ್ತರಿಂದ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ ಮಾತನಾಡಿ, ನಮ್ಮ ಪತ್ರಿಕಾ ಸಂಘ ರಾಜ್ಯದಲ್ಲಿರುವ ಉತ್ತಮ ಸಂಘಟನೆಗಳಲ್ಲಿ ಒಂದು. ನಮ್ಮ ಹಿಂದಿನ ತಲೆಮಾರಿನ ಪತ್ರಕರ್ತರ ಪ್ರಾಮಾಣಿಕತೆ ಮತ್ತು ನಿಷ್ಠೆಯನ್ನು ಈಗಿನ ಮತ್ತು ಮುಂದಿನ ತಲೆಮಾರಿನ ಪತ್ರಕರ್ತರು ಅನುಸರಿಸಬೇಕು ಎಂದರು.

ಅಧ್ಯಕ್ಷತೆವಹಿಸಿದ್ದ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಮಾತನಾಡಿ, ಪತ್ರಕರ್ತರಿಗೆ ಬದ್ಧತೆ, ವೃತ್ತಿಯ ಕುರಿತಾದ ಪ್ರಾಮಾಣಿಕತೆ ಮುಖ್ಯ. ಸತ್ಯವಾದ ಮಾಹಿತಿಯನ್ನು ಸಮಾಜಕ್ಕೆ ನೀಡುವುದು ನಮ್ಮ ಕರ್ತವ್ಯ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಪಾಟೀಲ ಮುಂಡಗೋಡ, ಹಿರಿಯ ಪತ್ರಕರ್ತ ಜಿ.ಜಿ. ಹೆಗಡೆ ಬಾಳಗೋಡ ಮಾತನಾಡಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಗಣೇಶ ಭಟ್ಟ ಸ್ವಾಗತಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ನಾಗರಾಜ ಭಟ್ಟ ವಂದಿಸಿದರು. ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿಗೆ ಬಂಜಾರ ಸಮಾಜದ ವಿರೋಧ
ಜಿಲ್ಲೆಗೆ ಒಲಿದುಬಂದ 17ಕ್ಕೂ ಅಧಿಕ ಕೊಡುಗೆಗಳು