ಅಭಿವೃದ್ಧಿ ವೈಫಲ್ಯ ಮುಚ್ಚಲು ಸಮಾಜ ವಿಭಜನೆ: ಆಸಿಫ್ ಕೋಟೇಶ್ವರ

KannadaprabhaNewsNetwork |  
Published : May 15, 2026, 02:30 AM IST
14ಆಸಿಫ್ | Kannada Prabha

ಸಾರಾಂಶ

ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು “ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣ” ಎಂದು ಟೀಕಿಸಿರುವ ಶಾಸಕ ಯಶ್ ಪಾಲ್ ಸುವರ್ಣ ಅವರ ಹೇಳಿಕೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ಖಂಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು “ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣ” ಎಂದು ಟೀಕಿಸಿರುವ ಶಾಸಕ ಯಶ್ ಪಾಲ್ ಸುವರ್ಣ ಅವರ ಹೇಳಿಕೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ಖಂಡಿಸಿದ್ದಾರೆ.

ಹಿಜಾಬ್ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ. ಹಿಜಾಬ್ ಎನ್ನುವುದು ಕೇವಲ ಉಡುಪು ಅಲ್ಲ. ಅದು ಮುಸ್ಲಿಂ ಮಹಿಳೆಯರ ಧಾರ್ಮಿಕ ನಂಬಿಕೆ, ವೈಯಕ್ತಿಕ ಗೌರವ ಹಾಗೂ ಸಂವಿಧಾನಬದ್ಧ ಹಕ್ಕಿನ ಪ್ರತೀಕವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಹಿಜಾಬ್ ಗೆ ಅವಕಾಶ ನೀಡಿದ್ದು ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣ ಎಂದು ಶಾಸಕರು ಬಣ್ಣಿಸಿದ್ದು ಅತ್ಯಂತ ದುರುದ್ದೇಶಪೂರಿತ ಹಾಗೂ ಸಮಾಜದಲ್ಲಿ ದ್ವೇಷ ಬಿತ್ತುವ ಪ್ರಯತ್ನವಾಗಿದ್ದು, ಬಿಜೆಪಿಯ ನಾಯಕರಿಗೆ ಜನರ ನೈಜ ಸಮಸ್ಯೆಗಳಿಗಿಂತ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ರಾಜಕೀಯವೇ ಮುಖ್ಯವಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಸಂಪೂರ್ಣ ವಿಫಲರಾದ ಉಡುಪಿಯ ಶಾಸಕರು ಇದೀಗ ಮತ್ತೆ ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯ ಹಾಳು ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ. ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡಲು ನಿರಂತರ ಪ್ರಯತ್ನಗಳು ನಡೆಯುತ್ತಿದ್ದು, ಜನರು ಈ ರೀತಿಯ ಷಡ್ಯಂತ್ರ ರಾಜಕಾರಣವನ್ನು ಅರ್ಥ ಮಾಡಿಕೊಂಡಿದ್ದಾರೆ. ಮುಂದೆಯೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಎಸ್‌ಡಿಪಿಐ ತನ್ನ ಹೋರಾಟವನ್ನು ಮತ್ತಷ್ಟು ಬಲವಾಗಿ ಮುಂದುವರಿಸಲಿದೆ ಎಂದು ಆಸಿಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಐತಿಚಂಡ ರಮೇಶ್ ಉತ್ತಪ್ಪಗೆ ಆಹ್ವಾನ
ಸುನಿಲ್ ಕುಮಾರ್ ಮೇಲೆ ಕ್ರಮಕ್ಕೆ ಮಹಿಳಾ ಕಾಂಗ್ರೆಸ್ ಮನವಿ