ಶೇ.100ರಷ್ಟು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ನಿರ್ದೇಶನ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯಲ್ಲಿ ಯಾರೂ ಸಹ ಬಿಟ್ಟು ಹೋಗದಂತೆ ಶೇ.100ರಷ್ಟು ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.
ಆದಿವಾಸಿ ಕುಟುಂಬಗಳ ಬಗ್ಗೆ ಗಮನ:
ಸಮೀಕ್ಷೆ ವೇಗ ಹೆಚ್ಚಲಿ:
ಸಮೀಕ್ಷೆ ನಂತರ ಬೇಕಂತಲೇ ಸಮೀಕ್ಷೆಗೆ ಬಂದಿಲ್ಲ ಎಂಬ ದೂರುಗಳು ಸಹ ಬರುತ್ತವೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಶೇ.100ರಷ್ಟು ಸಮೀಕ್ಷೆ ನಡೆಸುವುದರ ಜೊತೆಗೆ ಡೂಪ್ಲಿಕೇಟ್(ನಕಲು) ಆಗದಂತೆಯೂ ಸಹ ಎಚ್ಚರವಹಿಸಬೇಕು. ಸಮೀಕ್ಷೆ ಸಂದರ್ಭ ಸುಮಾರು 60 ಪ್ರಶ್ನಾವಳಿಗಳಿದ್ದು, ಕುಟುಂಬಗಳಿಂದ ಮಾಹಿತಿ ಪಡೆದು ಆ್ಯಪ್ ಮೂಲಕವೇ ಸಮೀಕ್ಷೆ ಮಾಡಲಾಗುತ್ತದೆ ಎಂದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವು ಸೆ.22 ರಿಂದ ಅ.7ರ ವರೆಗೆ ನಡೆಯಲಿದೆ. ಸಮೀಕ್ಷೆಗಾಗಿ ವಿಶೇಷ ಆ್ಯಪ್ ನಿಗದಿಪಡಿಸಲಾಗಿದೆ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್ ಮಾಹಿತಿ ನೀಡಿ, ಸಮೀಕ್ಷೆಯಲ್ಲಿ 150 ಕುಟುಂಬಕ್ಕೆ ಒಬ್ಬ ಸಮೀಕ್ಷೆದಾರರನ್ನು ನೇಮಿಸಲಾಗುತ್ತದೆ ಎಂದರು.
ಈಗಾಗಲೇ ಪ್ರತೀ ಕುಟುಂಬಕ್ಕೂ ಸಾಮಾಜಿಕ ಮತ್ತು ಶೈಕ್ಷಣಿಕ ಸಂಬಂಧ ಮನೆಮನೆಗೆ ಸ್ಟಿಕ್ಕರ್ ಅಳವಡಿಸಿಕೊಂಡು ಬರಲಾಗುತ್ತಿದ್ದು, ಶೇ.75ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದಂತೆ ಸ್ಟಿಕ್ಕರ್ಗಳನ್ನು ಅಳವಡಿಸುವ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.ಮಾಸ್ಟರ್ ತರಬೇತಿದಾರರಾದ ಪ್ರಸನ್ನ, ಕೃಷ್ಣಮೂರ್ತಿ, ಜೀವನ್ ಕುಮಾರ್, ನಾರಾಯಣ, ಗುರುಸ್ವಾಮಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಆ್ಯಪ್ ಮೂಲಕ ಸಮೀಕ್ಷೆ ನಡೆಸುವ ಬಗ್ಗೆ ವಿವರಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ತಹಸೀಲ್ದಾರ್ ಪ್ರವೀಣ್ ಕುಮಾರ್, ಶ್ರೀಧರ, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್, ಆನಂದ, ಕೃಷ್ಣಪ್ಪ, 30 ಮಂದಿ ಮಾಸ್ಟರ್ ತರಬೇತಿದಾರರು, ತಾ.ಪಂ. ಇಒಗಳು, ಇತರರು ಇದ್ದರು.