ಕನ್ನಡಪ್ರಭ ವಾರ್ತೆ ಮಂಡ್ಯ
ಎಐಸಿಸಿ ಮತ್ತು ಕೆಪಿಸಿಸಿಯಿಂದ ಆಗಮಿಸಿದ್ದ ವೀಕ್ಷಕರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು-ಕಾರ್ಯಕರ್ತರ ಅಭಿಪ್ರಾಯಗಳೆಲ್ಲವನ್ನೂ ಪಡೆದಿದ್ದಾರೆ. ಎಐಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ವೇಳೆ ಸಾಮಾನ್ಯರಲ್ಲಿ ಸಾಮಾನ್ಯರಿಗೂ ಅವಕಾಶಗಳು ಸಿಗುತ್ತವೆ ಎಂಬುದನ್ನು ಕುಮಾರ್ ಕೊಪ್ಪ ಆಯ್ಕೆ ಸಾಕ್ಷೀಕರಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇಡೀ ರಾಜ್ಯದಲ್ಲೇ ದಲಿತ ಸಮುದಾಯದ ಕುಮಾರ್ ಕೊಪ್ಪ ಒಬ್ಬರನ್ನೇ ಮಂಡ್ಯ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದೆ. ಇದಕ್ಕೆ ಕಾಂಗ್ರೆಸ್ನ ಎಲ್ಲ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿ ಸಾಕಾರಗೊಳಿಸಿದ್ದಾರೆ. ನಾನು ಕೂಡ ಜಿಲ್ಲಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಎಐಸಿಸಿಯ ತೀರ್ಮಾನವನ್ನು ಸರ್ವಾನುಮತದಿಂದ ಒಪ್ಪಿ ಕುಮಾರ್ ಕೊಪ್ಪ ಅವರ ಕೈ ಬಲಪಡಿಸುವ ಮೂಲಕ ಪಕ್ಷವನ್ನು ಸದೃಢವಾಗಿಸಲು ಶ್ರಮಿಸುವುದಾಗಿ ಹೇಳಿದರು.ಕುಮಾರ್ ಕೊಪ್ಪ ಅವರು ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಯುವಜನ ಸೇವೆಯ ಮೂಲಕ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲೆಯಾದ್ಯಂತ ೨೫ ವರ್ಷ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಸಾಕ್ಷರತೆ, ಸಂಘಟನೆ, ಯುವಜನ ಸೇವೆ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನೂರಾರು ಯುವಜನರಿಗೆ ಸನ್ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ಮಾಡಿದ್ದಾರೆ ಎಂದರು.
ಮಂಡ್ಯ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಾಜಿ, ಮುಖಂಡರಾರ ಸಿ.ಎಂ.ಕ್ರಾಂತಿಸಿಂಹ, ಶಿವಲಿಂಗೇಗೌಡ, ಯೋಗೇಶ್, ವೀಣಾ ಶಂಕರ್, ಮಂಜುಳಾ, ಡಿ.ಎಲ್.ಶಂಕರಲಿಂಗೇಗೌಡ, ಉಮ್ಮಡಹಳ್ಳಿ ನಾಗೇಶ್, ಎಚ್.ಎಂ.ಉದಯ್ ಕುಮಾರ್ ಹಾಜರಿದ್ದರು.