ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಡೀನ್ ಪ್ರೊ. ಎಂ.ಗುರುಲಿಂಗಯ್ಯ

KannadaprabhaNewsNetwork |  
Published : Aug 21, 2024, 12:34 AM IST
ತುಮಕೂರು ವಿಶ್ವವಿದ್ಯಾನಿಲಯದ ಡಿ. ದೇವರಾಜ ಅರಸು ಅಧ್ಯಯನ ಪೀಠ ಮತ್ತು ಹಿಂದುಳಿದ ವರ್ಗಗಳ ಕೋಶವು ಮಂಗಳವಾರ ಆಯೋಜಿಸಿದ್ದ  ಡಿ. ದೇವರಾಜ ಅರಸು ಅವರ 109 ನೇ ಜಯಂತಿಯನ್ನು ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು ಉದ್ಘಾಟಿಸಿದರು.ಪ್ರೊ.ಎಂ.ಗುರುಲಿಂಗಯ್ಯ, ನಾಹಿದಾಜಮ್‌ಜಮ್, ಪ್ರೊ. ಪ್ರಸನ್ನಕುಮಾರ್‌ಕೆ., ಪ್ರೊ. ಪರಶುರಾಮ ಕೆ.ಜಿ., ಡಾ.ಗುಂಡೇಗೌಡ ಇದ್ದಾರೆ. | Kannada Prabha

ಸಾರಾಂಶ

12ನೇಯ ಶತಮಾನದ ಸಾಮಾಜಿಕ ನ್ಯಾಯದ ಪರಿಪಾಲಕ ಬಸವಣ್ಣನವರ ಆದರ್ಶವನ್ನು ಪ್ರತಿಪಾದಿಸಿದ ನಾಯಕ ದೇವರಾಜ ಅರಸು ಅವರು, ಡಾ. ಬಿ. ಆರ್.ಅಂಬೇಡ್ಕರ್‌ ಅವರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ತಲುಪಿಸಿ ಸಮ ಸಮಾಜವನ್ನು ರೂಪಿಸುವ, ಸಮಾಜಕ್ಕಾಗಿ ದುಡಿದು ಬದುಕುವ ವಿಕಾಸ ಮನಸ್ಥಿತಿಯಿದ್ದವರು,

ಕನ್ನಡಪ್ರಭ ವಾರ್ತೆ ತುಮಕೂರು

ನಾಡಿನ ಸಾಮಾಜಿಕ ನ್ಯಾಯದ ಹರಿಕಾರರಾಗಿ, ದೀನ ದುರ್ಬಲರ ಆಶಾಕಿರಣವಾಗಿ, ಜೀತ ಹಾಗೂ ಮಲ ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿದ ಧೀಮಂತ ನಾಯಕ ದೇವರಾಜ ಅರಸು ಚಿರಸ್ಮರಣೀಯ ಎಂದು ಕುವೆಂಪು ವಿವಿಯ ಕಲಾ ನಿಕಾಯದ ಡೀನ್ ಪ್ರೊ. ಎಂ.ಗುರುಲಿಂಗಯ್ಯ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಡಿ. ದೇವರಾಜ ಅರಸು ಅಧ್ಯಯನ ಪೀಠ ಮತ್ತು ಹಿಂದುಳಿದ ವರ್ಗಗಳ ಕೋಶವು ಮಂಗಳವಾರ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 109 ನೇ ಜಯಂತಿಯಲ್ಲ್ಲಿ‘ಪ್ರಸಕ್ತ ಸನ್ನಿವೇಶದಲ್ಲಿ ಡಿ. ದೇವರಾಜ ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯ ಪ್ರಸ್ತುತತೆ’ ಕುರಿತು ಮಾತನಾಡಿದರು.

12ನೇಯ ಶತಮಾನದ ಸಾಮಾಜಿಕ ನ್ಯಾಯದ ಪರಿಪಾಲಕ ಬಸವಣ್ಣನವರ ಆದರ್ಶವನ್ನು ಪ್ರತಿಪಾದಿಸಿದ ನಾಯಕ ದೇವರಾಜ ಅರಸು ಅವರು, ಡಾ. ಬಿ. ಆರ್.ಅಂಬೇಡ್ಕರ್‌ ಅವರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ತಲುಪಿಸಿ ಸಮ ಸಮಾಜವನ್ನು ರೂಪಿಸುವ, ಸಮಾಜಕ್ಕಾಗಿ ದುಡಿದು ಬದುಕುವ ವಿಕಾಸ ಮನಸ್ಥಿತಿಯಿದ್ದವರು, ತುಳಿತಕ್ಕೊಳಗಾದವರ ಧ್ವನಿಯಾಗಿ ಅರಸು ಹಿಂದುಳಿದ ಸಮುದಾಯಗಳ ನಾಯಕರಾಗಿ ಸದಾ ಮೇಲ್ಪಂಕ್ತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

ಮಿಲ್ಲರ್ ಸಮಿತಿಯ ವರದಿ ಪ್ರಕಾರ 1921ರಲ್ಲಿ ಸಾಮಾಜಿಕ ನ್ಯಾಯದ ಕಾನೂನನ್ನು ದೇಶದಲ್ಲಿ ಅನುಷ್ಠಾನಗೊಳಿಸಲಾಯಿತು. ಎಲ್. ಜಿ. ಹಾವನೂರ್‌ ಅವರ ಸಮಿತಿಯ ವರದಿಯ ಪ್ರಕಾರ ಕರ್ನಾಟಕದಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ 1977ರಲ್ಲಿ ಸಾಮಾಜಿಕ ನ್ಯಾಯದ ಕಾನೂನನ್ನು ಬಲಿಷ್ಠವಾಗಿ ಅನುಷ್ಠಾನಗೊಳಿಸಿದರು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಸಮಾಜದ ಏಳ್ಗೆಗಾಗಿ ಬದುಕಿದ ಅರಸು ಅವರ ನಾಯಕತ್ವ, ಗ್ರಾಮೋದ್ಧಾರದ ದೃಷ್ಟಿಕೋನ, ಸಮಾನತೆ, ಶಿಕ್ಷಣ, ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಅಭಿವೃದ್ಧಿಯ ವಿಭಿನ್ನ ವಿಚಾರಧಾರೆಗಳು ವಿಕಾಸ ಪಥದ ಹೆಜ್ಜೆಯಾಗಿ ದೇಶಕ್ಕೆ ಮಾದರಿಯಾಗಿವೆ ಎಂದರು.

ವಿವಿಯ ಡಿ. ದೇವರಾಜ ಅರಸು ಅಧ್ಯಯನ ಪೀಠದ ಸಂಯೋಜಕ ಡಾ.ಗುಂಡೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಹಿಂದುಳಿದ ವರ್ಗಗಳ ಕೋಶದ ನಿರ್ದೇಶಕ ಪ್ರೊ.ಪರಶುರಾಮ ಕೆ.ಜಿ. ವಂದಿಸಿದರು.ಕುಲಸಚಿವೆ ನಾಹಿದಾಜಮ್‌ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್‌ ಕೆ.,ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...