ಕೊಪ್ಪಳ: ಅಂತರ್ಜಾತಿ ಮದುವೆಯಾದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!

KannadaprabhaNewsNetwork |  
Published : Mar 07, 2024, 01:53 AM ISTUpdated : Mar 07, 2024, 09:20 AM IST
ಮದುವೆ | Kannada Prabha

ಸಾರಾಂಶ

ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರದಲ್ಲಿ ಅಮಾನವೀಯ ಪದ್ಧತಿಯೊಂದು ಅನಾವರಣವಾಗಿದೆ. ಅಂತರ್ಜಾತಿಯಲ್ಲಿ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ ಸಮಾಜದಿಂದಲೇ ಬಹಿಷ್ಕಾರ ಹಾಕಲಾಗಿದ್ದು, ಇತ್ಯರ್ಥಪಡಿಸಲು ಲಕ್ಷ ರುಪಾಯಿ ದಂಡ ಬೇಡಿಕೆ ಇಟ್ಟಿರುವ ವಿಕೃತ ಪ್ರಕರಣ ಬೆಳಕಿಗೆ ಬಂದಿದೆ.

ಸೋಮರಡ್ಡಿ ಅಳವಂಡಿ
ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರದಲ್ಲಿ ಅಮಾನವೀಯ ಪದ್ಧತಿಯೊಂದು ಅನಾವರಣವಾಗಿದೆ. ಅಂತರ್ಜಾತಿಯಲ್ಲಿ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ ಸಮಾಜದಿಂದಲೇ ಬಹಿಷ್ಕಾರ ಹಾಕಲಾಗಿದ್ದು, ಇತ್ಯರ್ಥಪಡಿಸಲು ಲಕ್ಷ ರುಪಾಯಿ ದಂಡ ಬೇಡಿಕೆ ಇಟ್ಟಿರುವ ವಿಕೃತ ಪ್ರಕರಣ ಬೆಳಕಿಗೆ ಬಂದಿದೆ.

ಗ್ರಾಮದಲ್ಲಿ ಈಗಾಗಲೇ ನಾಲ್ಕಾರು ಪ್ರಕರಣಗಳು ನಡೆದಿವೆಯಾದರೂ ಬೆಳಕಿಗೆ ಬಂದಿರಲಿಲ್ಲ. ಈಗ ವರ್ಷದ ಹಿಂದೆ ಮದುವೆಯಾಗಿರುವ ಶಂಕ್ರಪ್ಪ ಬೇವಿನಹಳ್ಳಿ ಎಂಬ ಕುಟುಂಬಕ್ಕೆ ಹಾಕಿರುವ ಬಹಿಷ್ಕಾರ ಪ್ರಕರಣ ಬೆಳಕಿಗೆ ಬಂದಿದೆ.

ಶಂಕರಪ್ಪ ಅವರ ಮಗ ಮತ್ತೊಂದು ಜಾತಿಯ ಯುವತಿಯೊಂದಿಗೆ ಮದುವೆಯಾಗಿದ್ದಾರೆ. ಮದುವೆಯಾದ ಪತಿ, ಪತ್ನಿ ಅನ್ಯೋನ್ಯವಾಗಿದ್ದಾರೆ. ಎರಡೂ ಕುಟುಂಬದವರಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. 

ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ. ಆದರೆ, ಶಂಕ್ರಪ್ಪ ಅವರ ಸಮಾಜದವರು ಈಗ ಅವರನ್ನು ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಟ್ಟಿದ್ದಾರೆ. ಅವರನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆಯುವಂತಿಲ್ಲ; ಅವರ ಮನೆ ಕಾರ್ಯಕ್ರಮಕ್ಕೆ ಸಮಾಜದ ಯಾರೂ ಸಹ ಹೋಗುವಂತಿಲ್ಲ.

ಹೀಗಾಗಿ, ಅವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಅಚ್ಚರಿ ಎಂದರೆ ಈ ಕುರಿತು ಶಂಕ್ರಪ್ಪ ದೂರು ನೀಡಲು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಪೊಲೀಸರು ಸಹ ಸಮಾಜದವರನ್ನು ಕರೆಸಿ, ಇತ್ಯರ್ಥ ಮಾಡಿಕೊಳ್ಳುವ ಸಲಹೆ ನೀಡಿದ್ದಾರೆ. ದೂರು ಸಹ ಸ್ವೀಕಾರ ಮಾಡಿಲ್ಲ.

₹1 ಲಕ್ಷ ಬೇಡಿಕೆ: ಅಂತರ್ಜಾತಿ ಮದುವೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವುದಲ್ಲದೆ, ಇತ್ಯರ್ಥ ಮಾಡಲು ₹1 ಲಕ್ಷ ದಂಡದ ಬೇಡಿಕೆ ಇಟ್ಟಿದ್ದಾರೆ. ಲಕ್ಷ ರುಪಾಯಿಯನ್ನು ಕಡಿಮೆ ಮಾಡುವ ಪ್ರಯತ್ನ ನಡೆದು, ಈಗ ₹50 ಸಾವಿರ ಕೇಳಿದ್ದಾರೆ.

ಅಷ್ಟು ಕೊಡಲು ಆಗುವುದಿಲ್ಲ ಎಂದಾಗ ಬುಧವಾರ ನಡೆದ ರಾಜೀ ಪಂಚಾಯಿತಿಯಲ್ಲಿ ₹21 ಸಾವಿರ ರುಪಾಯಿಯನ್ನಾದರೂ ಕೊಡಲೇಬೇಕು ಎಂದು ಪಟ್ಟುಹಿಡಿದಿದ್ದಾರೆ. ದಂಡ ಪಾವತಿ ಮಾಡದೇ ಸಮಸ್ಯೆ ಇತ್ಯರ್ಥ ಅಸಾಧ್ಯ ಎಂದಿದ್ದಾರೆ ಎಂದು ಶಂಕ್ರಪ್ಪ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ