ಸಮಾಜ ಸೇವೆ ಪ್ರತಿಯೊಬ್ಬರ ಜವಾಬ್ದಾರಿ: ಅಭಿನವ ಗವಿಸಿದ್ದೇಶ್ವರ ಶ್ರೀಗಳು

KannadaprabhaNewsNetwork |  
Published : Jun 22, 2026, 02:45 AM IST
ಕಾರ್ಯಕ್ರಮದಲ್ಲಿ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಮಾತನಾಡಿದರು. | Kannada Prabha

ಸಾರಾಂಶ

ಸಮಾಜದ ಅಭಿವೃದ್ಧಿಗೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಂತ ಅವಶ್ಯಕ.

ಗಜೇಂದ್ರಗಡ: ಶಿಕ್ಷಣ ಹಾಗೂ ಸಾಮಾಜಿಕ ಸೇವೆ ಮೂಲಕ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ತಿಳಿಸಿದರು.

ಪಟ್ಟಣ ಸಮೀಪದ ಸೂಡಿ ಗ್ರಾಮದ ಅನ್ನದಾನೇಶ್ವರ ಸಾಂಸ್ಕೃತಿಕ ಭವನದಲ್ಲಿ ಚನ್ನು ಪಾಟೀಲ ಫೌಂಡೇಷನ್‌ನ ೫ನೇ ವಾರ್ಷಿಕೋತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವದಿಂದ ಬದುಕಿದ ಚನ್ನು ಪಾಟೀಲರ ಆದರ್ಶ ಯುವಜನತೆಗೆ ಮಾದರಿಯಾಗಿದ್ದು, ಈ ಫೌಂಡೇಷನ್ ಕಳೆದ ಐದು ವರ್ಷಗಳಿಂದ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದನ್ನು ಶ್ಲಾಘಿಸಿದರು.

ರೋಣದ ಗುಲಗಂಜಿಮಠ ಗುರುಪಾದ ಸ್ವಾಮೀಜಿ ಆಶೀರ್ವಚನ ನೀಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಂತ ಅವಶ್ಯಕ. ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡು ಯುವಜನರು ಉತ್ತಮ ನಾಗರಿಕರಾಗಿ ಬೆಳೆಯಬೇಕು. ಚನ್ನು ಪಾಟೀಲರಂಥ ಮಹನೀಯರ ಜೀವನ ಆದರ್ಶ ಸಮಾಜಕ್ಕೆ ದಾರಿದೀಪವಾಗಿವೆ ಎಂದರು.

ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಬೂದಿಶ್ವರ ಮಠದ ಡಾ. ವಿಶ್ವನಾಥ ಶ್ರೀಗಳು, ಜಿಪಂ ಮಾಜಿ ಅಧ್ಯಕ್ಷೆ ಬಸವರಾಜೇಶ್ವರಿ ಪಾಟೀಲ, ಸಿ.ವಿ. ವಂಕಲಕುಂಟಿ, ಎಸ್.ಎಲ್. ಹಂಚಿನಾಳ, ಸಿ.ಆರ್. ಗುದಗಿ, ಎಸ್.ಬಿ. ಕುಂಬಾರ ರವಿತೇಜ ಅಬ್ಬಿಗೇರಿ, ಮುತ್ತಣ್ಣ ಲಿಂಗನಗೌಡ್ರು, ಕಲ್ಲಿನಾಥಶಾಸ್ತ್ರಿಗಳು ಸಂಗಯ್ಯ ಹಿರೇಮಠ, ಮುತ್ತಣ್ಣ ಪಲ್ಲೇದ, ವೀರಣ್ಣ ಅಂಗಡಿ, ಬಾಬುಗೌಡ ಪಾಟೀಲ, ರಮೇಶ ಕವಲೂರ, ಅರಣು ಕುಲಕರ್ಣಿ, ಪ್ರಭು ಚವಡಿ, ಈಶಣ್ಣ ಮ್ಯಾಗೇರಿ ಸೇರಿ ಇತರರು ಇದ್ದರು.

ಉತ್ತಮ ಆರೋಗ್ಯಕ್ಕೆ ಯೋಗ ಪೂರಕ

ಗಜೇಂದ್ರಗಡ: ಪಟ್ಟಣದ ಭಗವಾನ ಮಹಾವೀರ ಜೈನ್ ಆಯುರ್ವೇದಿಕ್ ಕಾಲೇಜು, ಆಸ್ಪತ್ರೆ ಹಾಗೂ ಸ್ನಾತಕೋತ್ತರ ಕೇಂದ್ರದ ವತಿಯಿಂದ ಇಲ್ಲಿನ ಜೋಡು ರಸ್ತೆಯ ಬಾಗಮಾರ ಜವಳಿ ಅಂಗಡಿ ಮುಂಭಾಗದಲ್ಲಿ ಭಾನುವಾರ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಅಧ್ಯಕ್ಷ ಅಶೋಕಕುಮಾರ ಬಾಗಮಾರ ಮಾತನಾಡಿ, ಯೋಗ ಎಂಬುದು ಮಾನಸಿಕ, ದೈಹಿಕ ಆರೋಗ್ಯ ಕಾಪಾಡುವ ಅಭ್ಯಾಸವಾಗಿದೆ. ಹೀಗಾಗಿ ಸರ್ಕಾರಗಳು ದೇಶದ ಪರಂಪರೆಯಾಗಿರುವ ಯೋಗದ ಪ್ರಯೋಜನವನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶ ಹಾಗೂ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರೂ ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಹಾಗೂ ನೆಮ್ಮದಿಯ ಜೀವನವನ್ನು ಕಟ್ಟಿಕೊಳ್ಳಬೇಕು ಎಂದರು.ಯೋಗ ತರಬೇತುದಾರರಾದ ಪ್ರಕಾಶ ಬಾಕಳೆ, ಬಸನಗೌಡ ಪಾಟೀಲ, ಮಾರ್ಗದರ್ಶನದಲ್ಲಿ ಸಾರ್ವಜನಿಕವಾಗಿ ನಡೆದ ಯೋಗಾಭ್ಯಾಸದಲ್ಲಿ ಅಜೀತ ಬಾಗಮಾರ, ಡಾ. ಎನ್.ಎಚ್. ಕುಲಕರ್ಣಿ ಸೇರಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ: ಆ.7, 8ರಂದು ‘ಆಳ್ವಾಸ್‌ ಪ್ರಗತಿ-2026’ ಬೃಹತ್‌ ಉದ್ಯೋಗ ಮೇಳ
ಮೆಸ್ಕಾಂ ಖಾಸಗೀಕರಣ ತಕ್ಷಣ ನಿಲ್ಲಿಸಿ: ಯೂನಿಯನ್‌ ಮನವಿ