ಸಾಮಾಜಿಕ ಕಳಕಳಿಯ ಅಂಗನವಾಡಿ ಕಾರ್ಯಕರ್ತೆಯರು

KannadaprabhaNewsNetwork |  
Published : Nov 03, 2025, 02:30 AM IST
ಹರಪನಹಳ್ಳಿ ಪಟ್ಟಣದ ಎಡಿಬಿ ಕಾಲೇಜು ಆವರಣದಲ್ಲಿ  ಎಂ.ಪಿ.ರವೀಂದ್ರ ಪ್ರತಿಷ್ಟಾನದ ವತಿಯಿಂದ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಸಮರ್ಪಣೆ ಕಾರ್ಯಕ್ರಮ ದಲ್ಲಿ  ಶಾಸಕಿ ಎಂ.ಪಿ.ಲತಾ ಅವರು ಸೀರೆ ಉಡುಗರೆ ನೀಡಿದರು | Kannada Prabha

ಸಾರಾಂಶ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಹಾಕುವರು

ಹರಪನಹಳ್ಳಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಹಾಕುವರು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಅವರು ಪಟ್ಟಣದ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅಂಗನವಾಡಿ ಶಾಲೆಗಳ ಸ್ಥಾಪನೆಯಾಗಿ 50 ವರ್ಷಗಳ ಸುದೀರ್ಘ ನೆನಪಿಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಎಂ.ಪಿ. ರವೀಂದ್ರ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮರ್ಪಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಭಾನುವಾರ ಮಾತನಾಡಿದರು.

ಕೋವಿಡ್‌ ಬಂದಾಗ ಅಂಗನವಾಡಿ ಕಾರ್ಯಕರ್ತೆಯರು ಜೀವ ಲೆಕ್ಕಿಸದೇ ಕೆಲಸ ಮಾಡಿದ್ದೀರಿ. ಕೆಲವರು ಅಂಗನವಾಡಿ ಕಾರ್ಯಕರ್ತೆಯರು ಏನು ಬ್ಯಾಗ್‌ ಹಾಕಿಕೊಂಡು ಹೋಗುತ್ತಾರೆ ಎನ್ನುತ್ತಾರೆ. ಆದರೆ ಅದೇ ಬ್ಯಾಗ್‌ ಗುರುತಿನಿಂದ ನಾನು ಗೆದ್ದಿದ್ದು ಎಂದು ಸ್ಮರಿಸಿದರು.

ತಳ ಮಟ್ಟದವರು ನನ್ನನ್ನು ಗುರುತಿಸಿದ್ದಾರೆ. ಮುಷ್ಟಿ ಪ್ರೀತಿ ನೀಡಿದ್ದೀರಿ ನಿಮಗೆ ನಾನು ಅಭಿನಂದನೆ ಸಲ್ಲಿಸುವುದು ಹೆಮ್ಮೆಯ ಸಂಗತಿ. ಅಂಗನವಾಡಿ ಕಾರ್ಯಕರ್ತೆಯರು ಸಾಮಾಜಿಕ ಕಳಕಳಿಯುಳ್ಳವರು ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಕುಬೇರಗೌಡ, ಮುಖಂಡರಾದ ಗೌತಮ್ ಪ್ರಭು, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಲಾಟಿ ದಾದಾಪೀರ, ಪುರಸಭಾ ಸದಸ್ಯರಾದ ಅಬ್ದುಲ್‌ ರಹಿಮಾನ್, ಜಾಕೀರ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ, ಯುವ ಮುಖಂಡ ಶಮಿವುಲ್ಲಾ, ವಕೀಲ ಬಸವರಾಜ ಸಂಗಪ್ಪನವರ್, ಇಸ್ಮಾಯಿಲ್‌ ಎಲಿಗಾರ, ಮತ್ತೂರು ಬಸವರಾಜ ಉಪಸ್ಥಿತರಿದ್ದರು.

ಹರಪನಹಳ್ಳಿ ಪಟ್ಟಣದ ಎಡಿಬಿ ಕಾಲೇಜು ಆವರಣದಲ್ಲಿ ಎಂ.ಪಿ. ರವೀಂದ್ರ ಪ್ರತಿಷ್ಠಾನದಿಂದ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕಿ ಎಂ.ಪಿ.ಲತಾ ಸೀರೆ ಉಡುಗೊರೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ