ಕನ್ನಡಪ್ರಭ ವಾರ್ತೆ ರಿಪ್ಪನ್ಪೇಟೆ
ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಕಾರ್ಮಿಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕಾರ್ಮಿಕರಿಗೆ ಸವಲತ್ತುಗಳ ಮಾಹಿತಿ ನೀಡಲಾಗುತ್ತಿದೆ ಎಂದರು.
ಅನಾರೋಗ್ಯ ಪೀಡಿತ ಕಾರ್ಮಿಕರ ಕುಟುಂಬಕ್ಕೆ ನೆರವು, ಸರ್ಕಾರಿ ಶಾಲೆಗಳ ಆಭಿವೃದ್ದಿಗೆ ಸಹಾಯ, ಧಾರ್ಮಿಕ ಕೇಂದ್ರಗಳ ಸ್ವಚ್ಚತೆ ಮತ್ತಿತರ ಕಾರ್ಯಗಳಲ್ಲಿ ನಿರಂತರ ತೊಡಗಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕಾರ್ಮಿಕರು ಇಂತಹ ಸುಳ್ಳು ವಂದತಿಗಳಿಗೆ ಹೆದರಿಕೊಳ್ಳುವ ಅಗತ್ಯವಿಲ್ಲ. ಪ್ರಮಾಣಿಕವಾಗಿ ಸಂಘವನ್ನು ಪ್ರಗತಿಯತ್ತ ಸಾಗಿಸುವ ನಿಟ್ಟಿನಲ್ಲಿ ಸಂಘಟನೆ ತನ್ನ ಕೆಲಸ ಮಾಡಬೇಕು ಎಂದರು.ಹೆರಿಗೆ ಸಂದರ್ಭ ಸುಮಾ ಎಂಬುವರು ಮೃತಪಟ್ಟಿದ್ದು, ಅವರ ಮಗುವಿನ ಯೋಗಕ್ಷೇಮಕ್ಕಾಗಿ ಸಂಘದಿಂದ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆಯಲಾಯಿತು,