ಹಾವೇರಿ: ದೇಶ ಕಾಯುವ ಸೈನಿಕ, ದೇಶದಲ್ಲಿ ನಡೆಯುವ ಘಟನೆಗಳನ್ನು ವರದಿ ಮಾಡುವ ಪತ್ರಿಕಾ ರಂಗ, ಕೃಷಿ ಪ್ರತಿಯೊಂದು ಜೀವಿಗೂ ಅನ್ನ, ಆಹಾರ ಪೂರೈಸುತ್ತದೆ. ಹಾಗಾಗಿ ಈ ಮೂರು ಕ್ಷೇತ್ರಗಳು ಸಮಾಜದ ಅಭಿವೃದ್ಧಿಗಾಗಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕರಜಗಿ ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪತ್ರಕರ್ತ ಮಾಲತೇಶ ಅಂಗೂರ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳ ವೈಜ್ಞಾನಿಕ ಮನೋಭಾವನೆ ಹೆಚ್ಚಿಸುತ್ತದೆ. ಮುದ್ದು ಮಕ್ಕಳು ವಿವಿಧ ಬಗೆಯ ವಿಶೇಷ ಮಾದರಿಗಳನ್ನು ಚೆನ್ನಾಗಿ ಮಾಡಿದ್ದಾರೆ. ಶ್ರೀಗಳು ಅನುಭವಿ ಶಿಕ್ಷರೊಂದಿಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರ ಕೊಡುವ ಮೂಲಕ ಶಾಲೆಯ ಸಮಗ್ರ ಅಭಿರುದ್ದಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.
ಡಾ. ಸಂಗಮೇಶ ದೊಡ್ಡಗೌಡ್ರ ಮಾತನಾಡಿ, ಶ್ರೀಗಳು ಸುಂದವಾದ ಕಟ್ಟಡದ ಜೊತೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಮಕ್ಕಳು ಅದ್ಭುತವಾಗಿ ಮಾಡಿದ ಇಂದಿನ ವಿಜ್ಞಾನ ವಸ್ತು ಪ್ರದರ್ಶನ ನೋಡಿ ತುಂಬಾ ಸಂತಸವಾಗಿದೆ ಎಂದರು.ಮುಖ್ಯೋಪಾಧ್ಯಾಯ ಶಂಕರ ಅಕ್ಕಸಾಲಿ ಮಾತನಾಡಿದರು. ವೈದ್ಯರಾದ ಡಾ. ಗುಹೇಶ್ವರ ಪಾಟೀಲ, ಡಾ. ಶರಣಬಸವ ಅಂಗಡಿ, ಡಾ. ಶಿವಾನಂದ ಕೆಂಬಾವಿ, ಡಾ. ದಯಾನಂದ ಸುತಕೋಟಿ, ಡಾ. ಸಿದ್ದನಗೌಡ, ಡಾ. ಗಂಗಯ್ಯ ಕುಲಕರ್ಣಿ ಮೊದಲಾದವರನ್ನು ಶ್ರೀಗಳು ಸನ್ಮಾನಿಸಿದರು. ಚೇತನಾ ಮತ್ತು ಗೌಸಿಯಾ ಕಾರ್ಯಕ್ರಮ ನಿರೂಪಿಸಿದರು.