ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮತ್ತು ಸಾರಿಗೆ ಇಲಾಖೆ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಬುಧವಾರ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಮಿಕರ ಪರ 3 ಯೋಜನೆಕಾರ್ಮಿಕರ ಪರವಾದ ಮೂರು ಯೋಜನೆಗಳನ್ನು ಜಾರಿ ಮಾಡಿದೆ. ದ್ವಿಚಕ್ರ ವಾಹನ ಸೇರಿದಂತೆ ವಿವಿಧ ಸಾರಿಗೆ ವ್ಯವಸ್ಥೆಯ ಮೂಲಕ ಆಹಾರ ಪೂರೈಕೆ ಮತ್ತಿತರ ಸೇವೆಗಳನ್ನು ನೀಡುತ್ತಿರುವ ಸ್ವಿಗ್ಗಿ, ಜೊಮ್ಯಾಟ್ ಇನ್ನಿತರ ಕಂಪನಿಗಳ ಕಾರ್ಮಿಕರ ಅನುಕೂಲಕ್ಕಾಗಿ ಗಿಗ್ ಎಂಬ ವಿಶಿಷ್ಟ ಯೋಜನೆಯನ್ನು ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಗೃಹ ಕಾರ್ಮಿಕರಿಗಾಗಿ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿ ಮಾಡಲಾಗುವುದು.
ಸಿನಿಮಾ ಟಿಕೆಟ್ ಮೇಲೆ ಶೇ.1 ಅಥವಾ 2 ರಷ್ಟು ಮನರಂಜನಾ ತೆರಿಗೆ ಸಂಗ್ರಹಿಸಿ ಸಿನಿಮಾ ಕ್ಷೇತ್ರದ ಕಾರ್ಮಿಕರಿಗೆ ಯೋಜನೆ ತರಲಾಗುವುದು. ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವೇತನ ನೀಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿಯೊಂದನ್ನು ಸ್ಥಾಪಿಸಿ ಅದರ ಮೂಲಕ ನೇರವಾಗಿ ಸಂಬಂಧಪಟ್ಟ ನೌಕರರ ಖಾತೆಗೆ ವೇತನ ಜಮೆ ಮಾಡಲಾಗುವುದು. ಇದರಿಂದ ಹೊರಗುತ್ತಿಗೆ ನೌಕರರ ವೇತನ ಮತ್ತು ಸೌಲಭ್ಯಗಳನ್ನು ಮಧ್ಯವರ್ತಿ ಏಜೆನ್ಸಿಗಳು ದುರುಪಯೋಗ ಮಾಡಿಕೊಳ್ಳುವುದನ್ನು ತಡೆಯಲಾಗುವುದು ಎಂದರು.