ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾವೇರಮ್ಮ ಕೃಷ್ಣೇಗೌಡ ಪ್ರತಿಷ್ಠಾನ ಸಹಯೋಗದಲ್ಲಿ ಹಸಿರು ಭೂಮಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿ, ನರಹಳ್ಳಿ ಬಾಲ ಸುಬ್ರಹ್ಮಣ್ಯ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿ, ಸಮಾಜದಲ್ಲಿ ಒಳ್ಳೆಯವರು ಮಾತನಾಡುವ ಜತೆಗೆ ಒಳ್ಳೆಯದನ್ನು ಕೇಳಿಸಿಕೊಂಡು ಸಮಾಜ ತಿದ್ದುವ ಕೆಲಸ ಮಾಡಬೇಕು, ಸಮಾಜ ಸುಧಾರಣೆ ಮಾಡಲು ಸಾಧ್ಯ ಎಂದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಸಮಾಜವನ್ನು ತಿದ್ದಿ ಸರಿದಾರಿಗೆ ತರುವ ಜವಬ್ದಾರಿ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಯಾದರೆ ಸಮಾಜ ಪ್ರಗತಿಯತ್ತ ಸಾಗಲಿದೆ ಎಂದರು.ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ.ಪದ್ಮ ಶೇಖರ್ ಮಾತನಾಡಿ, ರಾಜಕೀಯ, ಧಾರ್ಮಿಕ ಕ್ಷೇತ್ರಗಳು ಕಲುಷಿತಗೊಂಡಿವೆ. ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿವೆ. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಸಲಹೆ ನೀಡಿದರು.
ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಸಿ.ಪುಟ್ಟಸ್ವಾಮೀಗೌಡ, ಬಸವೇಶ್ವರ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅಮೃತಿರಾಜಶೇಖರ್, ಕ.ರಾ.ಸ.ನೌ.ಸಂಘದ ರಾಜ್ಯ ಕಾರ್ಯದರ್ಶಿ ಎಂ.ಜಯರಾಮ್, ಎಸ್.ಎನ್.ಕೆಂಪೇಗೌಡ, ಶಿವಕುಮಾರ್, ಲೋಕೇಶ್, ಡಾ.ಬಿ.ಬಸವರಾಜ್(ಕಂದ), ಹಸಿರು ಭೂಮಿ ಟ್ರಸ್ಟ್ನ ಜ್ಞಾನೇಶ್, ಕೋಕಿಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.