ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಕೆ.ಸುರೇಶ್

KannadaprabhaNewsNetwork |  
Published : Jun 06, 2024, 12:31 AM IST
5ಸಿಎಚ್‌ಎನ್‌55ಚಾಮರಾಜನಗರ ಪಟ್ಟಣದ ಕರಿವರದರಾಯ ಬೆಟ್ಟದಲ್ಲಿ ಅರಣ್ಯ ಇಲಾಖೆ ಮತ್ತು ಸ್ಕೌಟ್ ಮತ್ತು ಗೈಡ್ ಸಹಯೋಗದಲ್ಲಿ  ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ. ಸುರೇಶ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಚಾ.ನಗರದ ಕರಿವರದರಾಯ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸುರೇಶ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪಟ್ಟಣಗಳಲ್ಲಿ ಪ್ಲಾಸ್ಟಿಕ್ ಸೇರಿದಂತೆ ನಿರುಪಯುಕ್ತ ವಸ್ತುಗಳು ಹೆಚ್ಚು ಸಂಗ್ರಹಣೆಯಾಗಿ ಭೂಮಿಯಲ್ಲಿ ಸೇರಿಕೊಂಡು ಮಣ್ಣು ಮಲಿನಗೊಳ್ಳುತ್ತಿದೆ. ಇದರಿಂದ ಹೊರಬರುವ ವಿಷಕಾರಿ ವಸ್ತುಗಳಿಂದ ಪಾದರಸ, ಸೀಸ, ಕ್ಯಾಡ್ಮಿಯಂ, ಕ್ರೋಮಿಯಂ ಮುಂತಾದವುಗಳು ಜೀವ ಸಂಕುಲ ಮತ್ತು ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರುವುದರಿಂದ ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸುರೇಶ್ ಹೇಳಿದರು.ಚಾ.ನಗರದ ಕರಿವರದರಾಯ ಬೆಟ್ಟದಲ್ಲಿ ಅರಣ್ಯ ಇಲಾಖೆ ಮತ್ತು ಸ್ಕೌಟ್ ಮತ್ತು ಗೈಡ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೂ.5ರಂದು ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿ ವರ್ಷ ಒಂದೊಂದು ಧ್ಯೇಯ ವಾಕ್ಯಗಳೊಂದಿಗೆ ಈ ದಿನ ಆಚರಣೆಗೊಳ್ಳುತ್ತದೆ. ಈ ಬಾರಿಯ ವಿಶ್ವ ಪರಿಸರ ದಿನವನ್ನು ‘ನಮ್ಮ ಭೂಮಿ: ನಮ್ಮ ಭವಿಷ್ಯ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.

ವಾತಾವರಣದಲ್ಲಿ ಹೆಚ್ಚುತ್ತಿರುವ ಬಿಸಿ, ನಿರಂತರ ವಾಯು ಮಾಲಿನ್ಯ, ಜಲಮಾಲಿನ್ಯ, ಭೂ ಮಾಲಿನ್ಯ ಎಲ್ಲದಕ್ಕೂ ಬೆಲೆ ಕಟ್ಟುವ ಕಾಲ ಬಹಳ ದೂರವಿಲ್ಲ. ಇರುವ ಒಂದೇ ಒಂದು ಭೂಗ್ರಹವನ್ನು ಉಳಿಸಿಕೊಳ್ಳಬೇಕಾಗಿದೆ. ಹವಾಮಾನ ಏರುಪೇರುಗಳಿಂದ ಇದೇ ಮಾನವ ಕುಲ ರೋಗರುಜಿನ ಮತ್ತು ಆಹಾರ ಕೊರತೆಯಿಂದ ಬಳಲಿ ಮಾನವ ಸಂಕುಲ ನಾಶದ ಹಾದಿ ಹಿಡಿದಿದೆ ಎಂದರು. ವಲಯ ಅರಣ್ಯಾಧಿಕಾರಿ ಉಮೇಶ್ ಮಾತನಾಡಿ, ರಾಸಾಯನಿಕ ಮುಕ್ತ, ಸಾವಯವ ಹಾಗೂ ಸಸ್ಯ ಮೂಲದ ಆಹಾರ ಪದಾರ್ಥಗಳನ್ನೇ ಬಳಸಬೇಕು. ಇದರಿಂದ ಪರಿಸರಕ್ಕೂ ನಿರಾಳ, ನಮ್ಮ ಆರೋಗ್ಯಕ್ಕೂ ವರದಾನ ಎಂದರು.ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ. ಸುರೇಶ್ ಮಾತನಾಡಿ, ಜನರು ಸಂಘ ಸಂಸ್ಥೆಗಳೊಂದಿಗೆ ಕೈ ಜೋಡಿಸಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ. ಸಾರ್ವಜನಿಕರನ್ನು ಪರಿಸರ ಪ್ರೇಮಿಗಳಾಗಬೇಕು. ಹವಾಮಾನ ಸಂರಕ್ಷಣೆ ಬಗ್ಗೆ ಜಾಗೃತರಾಗುವುದು ಮುಖ್ಯ ಎಂದು ತಿಳಿಸಿದರು. ಸ್ಕೌಟ್ ಆ್ಯಂಡ್ ಗೈಡ್ ಜಿಲ್ಲಾ ಸಂಘಟಕ ಕೆ.ಪಿ. ಅಶೋಕ್ ಕುಮಾರ್. ಜೆ. ಶ್ರೀನಿಧಿ, ಅರಣ್ಯ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''