ಎಲ್.ವಿ.ನವೀನ್ಕುಮಾರ್
ವಿಶ್ವ ವಿಖ್ಯಾತ ಕೆಆರ್ಎಸ್ ಅಣೆಕಟ್ಟೆ ಬೃಂದಾವನ ಬಳಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಕಾವೇರಿ ನೀರಾವರಿ ನಿಗಮದಿಂದ 1.49 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿದ್ದ ಸೋಲಾರ್ ವಿದ್ಯುತ್ ತಂತಿ ಬೇಲಿ (ಪೆನ್ಸಿಂಗ್) ಕಾಮಗಾರಿ ನೀರಿನಲ್ಲಿ ಹೋಮ ಮಾಡಿದಂತಾಗಿದೆ.
ಪ್ರವಾಸಿ ತಾಣದಲ್ಲಿ ಶಾಶ್ವತವಾಗಿ ಚಿರತೆ ಹಾವಳಿ ತಪ್ಪಿಸುವ ಉದ್ದೇಶದಿಂದ ಕಾವೇರಿ ನೀರಾವರಿ ನಿಗಮದಿಂದ 2023ರ ಮಾರ್ಚ್ ತಿಂಗಳಲ್ಲಿ ಸೋಲಾರ್ ವಿದ್ಯುತ್ ತಂತಿ ಬೇಲಿ (ಪೆನ್ಸಿಂಗ್) ಆಳವಡಿಸುವ ಸಲುವಾಗಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು.ಕೆಆರ್ಎಸ್ನ ಉತ್ತರ ಭಾಗದಲ್ಲಿನ ಸರ್ಕಾರಿ ಹಣ್ಣಿನ ತೋಟದಲ್ಲಿ 15 ದಿನಗಳ ಹಿಂದೆ ಮತ್ತೊಮ್ಮೆ ಚಿರತೆ ಪ್ರತ್ಯೆಕ್ಷಗೊಂಡ ಚಿರತೆ ಸೆರೆಗೆ ಅರಣ್ಯಾಧಿಕಾರಿಗಳು ಬೋನ್ ಇಟ್ಟಿದ್ದು, ಚಿರತೆ ಹಾವಳಿ ತಡೆಯದ ಇಂತಹ ಕೋಟ್ಯಂತರ ರು. ವೆಚ್ಚದ ಪೆನ್ನಿಂಗ್ ಅಳವಡಿಕೆ ಕಾಮಗಾರಿ ಅಗತ್ಯವಿತ್ತೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಲಾರ್ ವಿದ್ಯುತ್ ತಂತಿ ಬೇಲಿ (ಪೆನ್ಸಿಂಗ್) ಆಳವಡಿಸುವ ಸಲುವಾಗಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು.
ಕೋಟ್ಯಂತರ ರು. ವೆಚ್ಚದಲ್ಲಿ ಪೆನ್ಸಿಂಗ್ ಅಳವಡಿಸುವ ಜೊತೆಗೆ ಚಿರತೆ, ಆನೆ, ಸಿಂಹ, ಹುಲಿ ಸೇರಿದಂತೆ ಇತರೆ ಪ್ರಾಣಿಗಳ ಶಬ್ದ ಕೇಳಿಬರುವಂತೆ ಸ್ವೀಕರ್ ಸಹ ಅಳವಡಿಸುವುದಾಗಿ ಟೆಂಡರ್ನಲ್ಲಿ ತಿಳಿಸಿದ್ದರು. ಆದರೆ, ಇಂತಹ ಯಾವುದೇ ಸ್ವೀಕರ್ಗಳನ್ನು ಎಲ್ಲೂ ಅಳಡಿಸಿಲ್ಲ. ಈಗ ಮತ್ತೆ ಬಳಿ ಪ್ರತ್ಯಕ್ಷಗೊಂಡಿದೆ. ಚಿರತೆ ಸೆರೆಗೆ ಬೋನ್ ಅಳವಡಿಸುವುದಾದರೆ ಕೋಟ್ಯಂತರ ರು. ಹಣ ಏಕೆ ವೆಚ್ಚ ಮಾಡಬೇಕಿತ್ತು ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.
ಚಿರತೆ ಹಾವಳಿ ತಪ್ಪಿಸುವ ಸಲುವಾಗಿ ಅಳವಡಿಸಿದ್ದ ಸೋಲಾರ್ ವಿದ್ಯುತ್ ತಂತಿ ಬೇಲಿಗೆ ಗಿಡ, ಗಂಟೆಗಳು ಬೆಳೆದು ಸಂಪೂರ್ಣವಾಗಿ ಆವರಿಸಿಕೊಂಡಿವೆ. ಒಂದು ವೇಳೆ ಸೋಲಾರ್ ತಂತಿಯಿಂದ ವಿದ್ಯುತ್ ಅವಘಡಗಳು ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಎದುರಾಗಿದೆ.
ಆರ್ಎಸ್ನ ಉತ್ತರ ಭಾಗದಲ್ಲಿನ ಸರ್ಕಾರಿ ಹಣ್ಣಿನ ತೋಟದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಆರ್ಎಸ್ನ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ರಾತ್ರಿ ಪಾಳಯದಲ್ಲಿ ಗಸ್ತು ತಿರುಗುವಾಗಿ ನಾಯಿಗಳ ಕಿರುಚಾಟ ಕಂಡು ಸ್ಥಳಕ್ಕೆ ಬಂದು ನೋಡಿದಾಗ ಚಿರತೆ ಗೋಚರಗೊಂಡಿದೆ.
- ಜಗದೀಶ್ ಗೌಡ, ಪಾಂಡವಪುರ ಅರಣ್ಯಾಧಿಕಾರಿ
- ಮಂಜುನಾಥ್ , ಗ್ರಾಪಂ ಸದಸ್ಯರು, ಕೆಆರ್ಎಸ್
ಇಲ್ಲಿಗೆ ದೇಶ, ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಬೃಂದಾವನಕ್ಕೆ ಆಗಮಿಸುತ್ತಾರೆ. ಅವರಿಗೆ ಸ್ಥಳೀಯ ಜಾಗದ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ವಿದ್ಯುತ್ ತಂತಿಗೆ ಆವರಿಸಿರುವ ಗಿಡಗಂಟಿಗಳಿಂದ ವಿದ್ಯುತ್ ಅವಘಡ ಸಂಭವಿಸಿದರೆ ಅದರ ನೈತಿಕ ಹೊಣೆ ಹೊರುವವರು ಯಾರು.- ನರಸಿಂಹ ಗ್ರಾಪಂ ಸದಸ್ಯರು, ಕೆಆರ್ಎಸ್
ನಿಗಮದ ವತಿಯಿಂದ ಇದೇ ರೀತಿ ಸರ್ಕಾರದ ಹಣ ದುರುಪಯೋಗವಾಗುತ್ತಿದೆ. ಕಾಮಗಾರಿ ಪಾರದರ್ಶಕವಾಗಿ ನಡೆಯದ ಕಾರಣ ಮತ್ತೊಮ್ಮೆ ಚಿರತೆ ಕಾಣಿಸಿಕೊಂಡಿದೆ. ಇದರಲ್ಲಿ ಅಧಿಕಾರಿ ಲೋಪ ಎದ್ದು ಕಾಣುತ್ತಿದೆ. ಸಂಬಂಧಪಟ್ಟ ಮೇಲಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.- ನಾಗೇಂದ್ರಕುಮಾರ್, ಗ್ರಾಪಂ ಸದಸ್ಯರು, ಕೆಆರ್ಎಸ್