ರೈತರ ಸಮಸ್ಯೆಯನ್ನು ಕಾಲಮಿತಿಯೊಳಗೆ ಬಗೆಹರಿಸಿ

KannadaprabhaNewsNetwork |  
Published : Oct 11, 2024, 11:46 PM IST
10ಎಚ್ಎಸ್ಎನ್10 : ಭೂಮಿ ದಸರಾ ಕಾರ್ಯಕ್ರಮವನ್ನು ಶಾಸಕ ಮಂಜು ಉದ್ಘಾಟಿಸಿದರು. | Kannada Prabha

ಸಾರಾಂಶ

ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಪಟ್ಟಣದ ಗಣಪತಿಕೊತ್ತಲು ಉದ್ಯಾನದಲ್ಲಿ ಕಂದಾಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ "ಭೂಮಿ ದಸರಾ " ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎ. ಮಂಜು ಮಾತನಾಡಿದರು. ರೈತರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಸರಿಪಡಿಸಿಕೊಡುವ ಕೆಲಸವನ್ನು ಕಂದಾಯ ಇಲಾಖೆ ನಿಗದಿತ ಕಾಲಮಿತಿಯಲ್ಲಿ ಮಾಡಿಕೊಡುವಂತೆ ಹೇಳಿದರು.ತಮ್ಮ ಜಮೀನಿನ ದಾಖಲೆಗಳನ್ನು ಸರಿಪಡಿಕೊಳ್ಳಲು ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಜನರು ವರ್ಷಗಟ್ಟಲೆ ಕಚೇರಿಗೆ ಅಲೆದಾಟ ನಡೆಸಬೇಕಿದೆ. ಇದನ್ನು ತಪ್ಪಸಿ ಜನರ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವ ಪ್ರವೃತ್ತಿಯನ್ನು ಇಲಾಖೆ ಬೆಳೆಸಿಕೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ಅರಕಲಗೂಡು ರೈತರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಸರಿಪಡಿಸಿಕೊಡುವ ಕೆಲಸವನ್ನು ಕಂದಾಯ ಇಲಾಖೆ ನಿಗದಿತ ಕಾಲಮಿತಿಯಲ್ಲಿ ಮಾಡಿಕೊಡುವಂತೆ ಶಾಸಕ ಎ. ಮಂಜು ತಿಳಿಸಿದರು.

ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಪಟ್ಟಣದ ಗಣಪತಿಕೊತ್ತಲು ಉದ್ಯಾನದಲ್ಲಿ ಕಂದಾಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ "ಭೂಮಿ ದಸರಾ " ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಜಮೀನಿನ ದಾಖಲೆಗಳನ್ನು ಸರಿಪಡಿಕೊಳ್ಳಲು ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಜನರು ವರ್ಷಗಟ್ಟಲೆ ಕಚೇರಿಗೆ ಅಲೆದಾಟ ನಡೆಸಬೇಕಿದೆ. ಇದನ್ನು ತಪ್ಪಸಿ ಜನರ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವ ಪ್ರವೃತ್ತಿಯನ್ನು ಇಲಾಖೆ ಬೆಳೆಸಿಕೊಳ್ಳಬೇಕು. ಹೋಬಳಿ ಕೇಂದ್ರಗಳಲ್ಲಿ ಸಭೆ ನಡೆಸಿ ಜನರ ಸಮಸ್ಯೆಗೆ ಸ್ಥಳದಲ್ಲೆ ಪರಿಹಾರ ದೊರಕಿಸಿಕೊಡುವ ಕೆಲಸ ನಡೆಸಿದಾಗ ತಾಲೂಕು ಕೇಂದ್ರಕ್ಕೆ ಜನರು ಬರುವುದು ತಪ್ಪುತ್ತದೆ ಎಂದರು.

ಜನರು ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವ ಜತೆಗೆ ಇತರೆ ಅರ್ಹರಿಗೂ ಇದರ ಬಗ್ಗೆ ಅರಿವು ಮೂಡಿಸಬೇಕು. ರೈತಾಪಿ ವರ್ಗದವರಿಗೆ ಹಲವು ತೊಂದರೆಗಳಿವೆ. ಇದರಿಂದಾಗಿಯೇ ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡಲು ಯಾರೂ ಮುಂದೆ ಬರುತ್ತಿಲ್ಲ. ರೈತರು ದುಶ್ಚಟಗಳಿಂದ ದೂರವಿದ್ದು ತಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಲು ಮುಂದಾಗುವಂತೆ ಸಲಹೆ ನೀಡಿದರು. ತಹಶೀಲ್ದಾರ್‌ ಕೆ.ಸಿ. ಸೌಮ್ಯ ಮಾತನಾಡಿ, ಕಂದಾಯ ಇಲಾಖೆಯ ಸವಲತ್ತುಗಳನ್ನು ಜನರಿಗೆ ತಲುಪಿಸುವ ಮೂಲಕ ಅರ್ಥಪೂರ್ಣ ರೀತಿಯಲ್ಲಿ ಭೂಮಿ ದಸರಾ ಆಚರಣೆ ನಡೆಸಿದ್ದು, ಇಲಾಖೆಯನ್ನು ಚುರುಕುಗೊಳಿಸಿ ಜನಸ್ನೇಹಿ ಮಾಡುವುದಾಗಿ ಹೇಳಿದರು.

50 ಜನರಿಗೆ ಬಗರ್‌ಹುಕುಂ ಸಾಗುವಳಿ ಪತ್ರ, 26 ಜನರಿಗೆ ವಿವಿಧ ಪಿಂಚಣಿ ಯೋಜನೆಯ ಮಂಜೂರಾತಿ ಪತ್ರ ಹಾಗೂ 5 ಮಂದಿ ಅರ್ಚಕರಿಗೆ ನೇಮಕಾತಿ ಪತ್ರವನ್ನು ವಿತರಿಸಲಾಯಿತು. ಪಪಂ ಉಪಾಧ್ಯಕ್ಷ ಸುಬಾನ್ ಷರೀಫ್‌, ದೊಡ್ಡಮಗ್ಗೆ ಗ್ರಾಪಂ ಅಧ್ಯಕ್ಷ ಕೊಡಕಹಳ್ಳಿ ಅಶೋಕ್, ಮುಖಂಡ ಎಂ.ಜಿ.ರಾಜೇಗೌಡ, ಗ್ರೇಡ್ -2 ತಹಶೀಲ್ದಾರ್‌ ಮಲ್ಲಿಕಾರ್ಜುನ್, ತಾಪಂ ಇಒ ಡಿ.ಡಿ.ಪ್ರಕಾಶ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ. ರಾಜೇಶ್, ಉಪ ನೋಂದಣಿ ಅಧಿಕಾರಿ ಸೋಮಶೇಖರ್, ಎಡಿಎಲ್‌ಆರ್‌ ಸುಂದರ್‌ , ಶಿರಸ್ತೇದಾರ್ ಸಿ. ಸ್ವಾಮಿ, ಕಂದಾಯ ನಿರೀಕ್ಷಕ ಕೆ.ಎಸ್. ಲೋಕೇಶ್. ದಸರಾ ಉತ್ಸವ ಸಮಿತಿಯ ರವಿಕುಮಾರ್, ಭಾಸ್ಕರ್‌, ಗೋಪಾಲ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ