ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ತಾಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ತುರ್ತು ಸಭೆಯಲ್ಲಿ ಮಾತನಾಡಿ, ಗೊಂದಲ ಇರುವ ಆಸ್ತಿಯ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಬೇಕು. ಆಸ್ತಿಯ ಫೋಟೊ, ವಿಡಿಯೋ ಮಾಡಿಕೊಂಡು ಅದು ಯಾರ ಅನುಭವದಲ್ಲಿ ಇದೆಯೋ ಅದರಂತೆ ಮೂಲ ದಾಖಲೆಗಳನ್ನು ತಾಳೆ ಮಾಡಿ ನೋಡಬೇಕು. ಪ್ರತಿ ಆಸ್ತಿಗೂ ಪ್ರತ್ಯೇಕ ಫೈಲ್ ಸಿದ್ಧಪಡಿಸಬೇಕು. ಬಳಿಕ ಅದನ್ನು ತಹಸೀಲ್ದಾರ್ಗೆ ಸಲ್ಲಿಸಬೇಕು. ಗ್ರೇಡ್-೨ ತಹಸೀಲ್ದಾರ್ ಇಷ್ಟೂ ಪ್ರಕ್ರಿಯೆಗಳ ಉಸ್ತುವಾರಿ ನೋಡಿಕೊಳ್ಳಬೇಕು ಎಂದು ಹೇಳಿದರು.
ತಾಲೂಕಿನ ಕಸಬಾ ಮತ್ತು ಬೆಳಗೊಳ ಹೋಬಳಿಯ ಕೆಲವೆಡೆ ವಕ್ಫ್ ಗೊಂದಲ ಉಂಟಾಗಿದ್ದು, ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರು ನೀಡುವ ದಾಖಲೆಗಳನ್ನು ಪರಿಶೀಲಿಸಿ, ಅದರ ಆಧಾರದ ಮೇಲೆ ತಹಸೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿ ಸಮಸ್ಯೆ ಬಗೆಹರಿಸಬೇಕು. ಈ ದಾಖಲೆಗಳನ್ನು ಸರ್ಕಾರಕ್ಕೂ ಕಳುಹಿಸಬೇಕಾಗಿದ್ದು, ನಿಖರ ಮಾಹಿತಿಗಳನ್ನು ಸಂಗ್ರಹಿಸಬೇಕು. ಸಿಬ್ಬಂದಿ ತಮಗೆ ವಹಿಸಿದ ಕಾರ್ಯ ಮಾಡದೆ ಸಬೂಬು ಹೇಳಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.ರೈತರ ಸಮಸ್ಯೆಗೆ ಕಿವಿಗೊಡಿ:
ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಮಾತನಾಡಿದರು. ಗ್ರೇಡ್-೨ ತಹಸೀಲ್ದಾರ್ ಚೈತ್ರ, ಎಡಿಎಲ್ಆರ್ ಮೇಘನಾ, ಎಇಇ ರಾಮಕೃಷ್ಣೇಗೌಡ, ಉಪ ತಹಸೀಲ್ದಾರ್ಗಳಾದ ವರುಣ್, ದಿನೇಶಕುಮಾರ್, ಕಂದಾಯ ನಿರೀಕ್ಷಕರಾದ ರೇವಣ್ಣ, ಭಾಸ್ಕರ್, ಪುಟ್ಟಸ್ವಾಮಿ, ಮಂಜುನಾಥ್ ಸಭೆಯಲ್ಲಿದ್ದರು.