ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸಿ

KannadaprabhaNewsNetwork |  
Published : Jan 04, 2024, 01:45 AM IST
ಕೂಡಗಿ‌ ಉಷ್ಣ ವಿದ್ಯುತ್ ಸ್ಥಾವರ ಮತ್ತು ರೈತರಿಗೆ ಇಬ್ಬರಿಗೂ ತೊಂದರೆಯಾಗದಂತೆ ಸಮಸ್ಯೆ ಬಗೆ ಹರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. | Kannada Prabha

ಸಾರಾಂಶ

ಕೂಡಗಿ‌ ಉಷ್ಣ ವಿದ್ಯುತ್ ಸ್ಥಾವರ ಮತ್ತು ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆ ಹರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರಕೂಡಗಿ‌ ಉಷ್ಣ ವಿದ್ಯುತ್ ಸ್ಥಾವರ ಮತ್ತು ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆ ಹರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.ಉಷ್ಣ ವಿದ್ಯುತ್ ಸ್ಥಾವರದಿಂದ ಉಂಟಾಗಿರುವ ಸಮಸ್ಯೆಗಳನ್ನು ಬಗೆ ಹರಿಸುವಂತೆ ಆಗ್ರಹಿಸಿ ಮಸೂತಿ, ಕೂಡಗಿ, ಗೊಳಸಂಗಿ ಮತ್ತು ತೆಲಗಿ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರನ್ನು ಇಂದು ಬುಧವಾರ ಬೆಳಿಗ್ಗೆ ಭೇಟಿ ಮಾಡಿ ಮನವಿ ಮಾಡಿದರು. ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ಭೂಮಿ ನೀಡಿರುವ ರೈತರ ಜಮೀನಿಗೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ ತಲಾ ₹4 ಲಕ್ಷ ಹೆಚ್ವುವರಿ ಪರಿಹಾರ ನೀಡಬೇಕು. ಭೂಮಿ ನೀಡಿದ ರೈತರ ಕುಟುಂಬಗಳಿಗೆ ಉದ್ಯೋಗ ನೀಡಬೇಕು. ಸ್ಥಾವರಕ್ಕಾಗಿ ನಿರ್ಮಿಸಲಾಗಿರುವ ಹಾರುಬೂದಿ ಕೆರೆಯಿಂದಾಗಿ ಕೆಳಭಾಗದ ಮಸೂತಿ ಗ್ರಾಮದ ಸುಮಾರು 400 ಎಕರೆ ಜಮೀನಿಗೆ ಸವಳು-ಜವಳು ಸಮಸ್ಯೆ ಎದುರಾಗಿದೆ. ಈ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಕಳೆದ ಆರು ವರ್ಷಗಳಿಂದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರೂ ಯಾರೂ‌ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಸಚಿವರ ಬಳಿ ಅಳಲು ತೋಡಿಕೊಂಡರು.

ಆಗ ಕೂಡಲೇ ಸ್ಪಂದಿಸಿದ ಸಚಿವರು, ಜಿಲ್ಲಾಧಿಕಾರಿ ಟಿ. ಭೂಬಾಲನ್ ಮತ್ತು ಕೂಡಗಿ‌ ಉಷ್ಣ ವಿದ್ಯುತ್ ಸ್ಥಾವರದ ಚೀಫ್ ಜನರಲ್ ಮ್ಯಾನೇಜರ್ ವಿಜಯಕೃಷ್ಣ ಪಾಂಡೆ ಅವರಿಗೆ ದೂರವಾಣಿ‌ ಕರೆ ಮಾಡಿ ನಾಳೆಯೇ ರೈತರೊಂದಿಗೆ ಸಭೆ ನಡೆಸಿ, ರೈತರ ಮತ್ತು ಕೂಡಗಿ‌ ಉಷ್ಣ ವಿದ್ಯುತ್ ಸ್ಥಾವರದ ಹಿತ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಮಸೂತಿ, ಗೊಳಸಂಗಿ, ಕೂಡಗಿ, ತೆಲಗಿ ಗ್ರಾಮಗಳ ಮುಖಂಡ ಸಿ. ಪಿ.ಪಾಟೀಲ, ಹೊನ್ನಪ್ಪ ಅಂಗಡಿ, ವಿವೇಕ ಪಾಟೀಲ, ಎಸ್.ಎಸ್. ಗರಸಂಗಿ, ನರೇಂದ್ರ ಪಾಟೀಲ‌, ಮಲ್ಲು ವೀರಣ್ಣವರ, ಸುರೇಶ ಬಡಿಗೇರ, ಮಹಾಂತೇಶ ಕಮತಗಿ, ಸುರೇಶ ದಳವಾಯಿ, ರಾಘವೇಂದ್ರ ಕುಲಕರ್ಣಿ, ಗುರುರಾಜ ಹಂಡಗಿ, ದೊಡ್ಡನಗೌಡ ಪಾಟೀಲ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ