ಜನರ ಸಮಸ್ಯೆಗಳನ್ನು ಪರಿಹರಿಸುವೆ: ಸಚಿವ ಸತೀಶ

KannadaprabhaNewsNetwork |  
Published : May 21, 2024, 12:46 AM IST
ರಾಯಬಾಗ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರು ಸಚಿವ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು. | Kannada Prabha

ಸಾರಾಂಶ

ರಾಯಬಾಗ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರು ಸಚಿವ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

ಕನ್ನಡಪ್ರಭ ವಾರ್ತೆ ರಾಯಬಾಗಲೋಕಸಭೆ ಚುನಾವಣೆ ಫಲಿತಾಂಶ ನಂತರ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಎಲ್ಲ ಸಮಸ್ಯೆಗಳನ್ನು ಪರಿಹರಿಸುವೆ ಎಂದು ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಆಹ್ವಾಲಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಮತಕ್ಷೇತ್ರದಲ್ಲಿ ಪಕ್ಷ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಹಗಲಿರುಳು ಪ್ರಾಮಾಣಿಕವಾಗಿ ಕೆಲಸ ಮಾಡಿದ ಪ್ರತಿಯೊಬ್ಬಕಾರ್ಯಕರ್ತರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರಿಗೆಅಭಿನಂದನೆ ತಿಳಿಸಿದರು.

ಮುಂಬರುವ ದಿನಗಳಲ್ಲಿ ರಾಯಬಾಗ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತಮಟ್ಟದಿಂದ ಬಲಿಷ್ಠವಾಗಿ ಕಟ್ಟಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಎಸ್.ಬಿ.ಘಾಟಗೆ, ಬಿಡಿಸಿಸಿ ನಿರ್ದೇಶಕ ಅಪ್ಪಾಸಾಬ ಕುಲಗುಡೆ, ಡಾ.ಎನ್.ಎ.ಮಗದುಮ್ಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಕಾಂಗ್ರೆಸ್‌ ರಾಯಬಾಗ ಬ್ಲಾಕ್‌ ಅಧ್ಯಕ್ಷ ಸಿದ್ದು ಬಂಡಗರ, ಅರ್ಜುನ ನಾಯಕವಾಡಿ, ಸದಾಶಿವ ದೇಶಿಂಗೆ, ಅಬ್ದುಲಸತ್ತಾರ ಮುಲ್ಲಾ, ಹಾಜಿ ಮುಲ್ಲಾ, ದಿಲೀಪ ಜಮಾದಾರ, ಬಾಹುಸಾಹೇಬ ಪಾಟೀಲ, ಡಿ.ಎಸ್.ನಾಯಿಕ, ಶಂಕರಗೌಡ ಪಾಟೀಲ, ಶಿವು ಪಾಟೀಲ, ನಾಮದೇವ ಪಾಟೀಲ, ಸಿದ್ದು ಮರ್ಯಾಯಿ, ಮಧುಸೂದನ ಬಿಳಗಿ ಸೇರಿ ನೂರಾರು ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ