ರಾಮನಗರ: ಬೆಂಗಳೂರು ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ವಿಧಾನ ಪರಿಷತ್ತು ಸದಸ್ಯ ಪುಟ್ಟಣ್ಣ ಅವರೊಂದಿಗೆ ಪದವೀಧರರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ಕ್ಷೇತ್ರ 36 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಎಲ್ಲೆಡೆ ಶಿಕ್ಷಕರು ಮತ್ತು ಪದವೀಧರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಬಾರಿ ವಿಶೇಷವಾಗಿ ಮತದಾರರು ಮತ ಚಲಾಯಿಸುವ ಸಮಯದಲ್ಲಿ ಸರಿಯಾದ ಕ್ರಮದಲ್ಲಿ ಮತ ಹಾಕುವಂತೆ ಮನವಿ ಮಾಡಲಾಗುತ್ತಿದೆ. ಕಳೆದ ಅವಧಿಯ ಚುನಾವಣೆಯಲ್ಲಿ 4 ಸಾವಿರಕ್ಕೂ ಹೆಚ್ಚು ಮತಗಳು ಅಸಿಂಧುಗೊಂಡಿದ್ದವು. ಹಾಗಾಗಿ ಈ ಬಾರಿ ಅಂತಹ ವಾತಾವರಣ ಸೃಷ್ಟಿಸದೆ ಕ್ರಮಬದ್ಧವಾಗಿ ಮತದಾನ ಮಾಡುವಂತೆ ಮನವಿ ಮಾಡಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಈ ಕ್ಷೇತ್ರದಿಂದ ಆಯ್ಕೆಯಾದವರು ಶಿಕ್ಷಕರು ಮತ್ತು ಪದವೀಧರರ ಸಮಸ್ಯೆ ಅರಿತು ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ. ಶೈಕ್ಷಣಿಕ ಮತ್ತು ಪದವೀಧರರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ರಾಜ್ಯದಲ್ಲಿ ಎಂಎಲ್ಸಿ ಹೇಗೆ ಕೆಲಸ ಮಾಡಬಹುದು ಎಂಬುದನ್ನು ತೋರಿಸಿದ್ದೇನೆ. ರಾಮೋಜಿಗೌಡರು ಎರಡು ಬಾರಿ ಸೋತಿದ್ದರೂ ಪ್ರಾಮಾಣಿಕವಾಗಿ ಹಗಲಿರುಳು ಈ ಕ್ಷೇತ್ರದಲ್ಲಿ ಹೋರಾಟ ಮಾಡುತ್ತಿದ್ದಾರೆ. ಅಂತಹ ಪ್ರಾಮಾಣಿಕ ವ್ಯಕ್ತಿಯನ್ನು ನೀವೆಲ್ಲರೂ ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಆರ್.ಕೆ.ಬೈರಲಿಂಗಯ್ಯ, ಶಾಂತಿನಿಕೇತನ ಶಿಕ್ಷಣ ಸಂಸ್ಥೆ ನಿರ್ದೇಶಕಿ ಸೌಮ್ಯಕುಮಾರಸ್ವಾಮಿ, ಶಿಕ್ಷಕ ನಾರಾಯಣ್ ಇತರರು ಹಾಜರಿದ್ದರು.
ವಿವಿಧ ಖಾಸಗಿ ಕಂಪನಿಗಳಲ್ಲಿ 9 ಸಾವಿರ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕೊಡಿಸಿದ್ದೇನೆ. ಮುಂದೆಯೂ ನಾನು ಮತ್ತು ಪುಟ್ಟಣ್ಣ ಸೇರಿ ರಾಮನಗರದಲ್ಲಿಯೇ ಬೃಹತ್ ಉದ್ಯೋಗ ಮೇಳ ಆಯೋಜಿಸಿ ಪದವೀಧರ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುತ್ತೇವೆ. ಶಿಕ್ಷಕರು, ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ.
- ರಾಮೋಜಿಗೌಡ, ಕಾಂಗ್ರೆಸ್ ಅಭ್ಯರ್ಥಿ, ಬೆಂಗಳೂರು ಪದವೀಧರ ಕ್ಷೇತ್ರ21ಕೆಆರ್ ಎಂಎನ್ 5.ಜೆಪಿಜಿರಾಮನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ಪದವೀಧರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಮತಯಾಚನೆ ಮಾಡಿದರು.