ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಫ್ಯಾಕ್ಸ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿದ ನೂತನ ನಿರ್ದೇಶಕರೊಂದಿಗೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ನಂಜುಂಡಪ್ರಸಾದ್ ಇದ್ದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ತಾಲೂಕಿನ ಸೋಮಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ೧೨ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತರು ಕ್ಲೀನ್ ಸ್ವೀಪ್ ವಿಜಯ ಸಾಧಿಸಿದ್ದು, ಬಿಜೆಪಿ ಬೆಂಬಲಿಗರು ಒಂದು ಕ್ಷೇತ್ರದಲ್ಲೂ ಗೆಲ್ಲದೆ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಸಾಲಗಾರರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತರಾದ ಆರತಿ, ಚಿಕ್ಕನಂಜಪ್ಪ, ಎಸ್.ನಾಗರಾಜು, ನೀಲಮ್ಮ, ಬಿ.ಪರಶಿವಮೂರ್ತಿ, ಎಚ್.ಎಂ.ಮಹದೇವಪ್ಪ, ಶಿವಕುಮಾರಸ್ವಾಮಿ, ಎಸ್.ಶಿವನಾಗಪ್ಪ, ಕೆ.ಸಿ.ಶಿವಪ್ಪ, ಶಿವಮೂರ್ತಿ ನಾಯಕ ಗೆಲುವು ಸಾಧಿಸಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಗುರುಪ್ರಸಾದ್, ಸಾಲಗಾರರ ಕ್ಷೇತ್ರದಿಂದ ಕೂಸಪ್ಪ ಶೆಟ್ಟಿ ಅವಿರೋಧ ಅಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದವು. ಅಂತಿಮವಾಗಿ ಮತದಾರ ಕಾಂಗ್ರೆಸ್ಗೆ ಜೈ ಎಂದಿದ್ದಾನೆ. ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನೂತನ ನಿರ್ದೇಶಕರನ್ನು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್ ಅಭಿನಂದಿಸಿದರು.
ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರು, ಸಹಕಾರ ಸಂಘದ ಎಲ್ಲಾ ಗ್ರಾಮದ ಕಾರ್ಯಕರ್ತರು ಇದ್ದರು. ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿದ ನೂತನ ನಿರ್ದೇಶಕರನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಭಿನಂದಿಸಿದ್ದಾರೆ.
ಎಸ್.ಶಿವನಾಗಪ್ಪ ಗೆಲುವು:
ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಶಿವನಾಗಪ್ಪ ಸಾಲಗಾರರ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಎಸ್.ಶಿವನಾಗಪ್ಪ ಅವರ ಗೆಲುವು ಬೇಕಿತ್ತು ಎಂಬುದು ಸಹಕಾರಿಗಳ ಮಾತಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.