ಕಾರ್ಯಾದೇಶ ಪತ್ರ ವಿತರಣೆ

KannadaprabhaNewsNetwork |  
Published : Jan 09, 2026, 02:45 AM IST
7ಎಂಡಿಕೆ1: ಕಾರ್ಯಾದೇಶ ಪತ್ರ ವಿತರಣೆ | Kannada Prabha

ಸಾರಾಂಶ

ಕೃಷಿ ಇಲಾಖೆಯಿಂದ ರೈತರಿಗೆ ಬೋರ್‌ವೆಲ್ ಕೊರೆಯಿಸಲು 25 ಸಾವಿರ ರು. ಸಹಾಯಧನವನ್ನು ನೀಡುವ ಯೋಜನೆಯ ಫಲಾನುಭವಿಗಳಿಗೆ ಶಾಸಕ ಡಾ. ಮಂತರ್ ಗೌಡ ಅವರು ಕಾರ್ಯಾದೇಶ ಪತ್ರ ವಿತರಿಸಿದರು.

ಸೋಮವಾರಪೇಟೆ: ಕೃಷಿ ಇಲಾಖೆಯಿಂದ ರೈತರಿಗೆ ಬೋರ್‌ವೆಲ್ ಕೊರೆಯಿಸಲು 25 ಸಾವಿರ ರು. ಸಹಾಯಧನವನ್ನು ನೀಡುವ ಯೋಜನೆಯ ಫಲಾನುಭವಿಗಳಿಗೆ ಶಾಸಕ ಡಾ. ಮಂತರ್ ಗೌಡ ಅವರು ಕಾರ್ಯಾದೇಶ ಪತ್ರ ವಿತರಿಸಿದರು.ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 31 ಮಂದಿ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ಕೃಷಿ ಕಾರ್ಯಗಳಿಗೆ ನೀರಾವರಿ ಅಗತ್ಯವಾಗಿದ್ದು, ಇದಕ್ಕಾಗಿ ಬೋರ್‌ವೆಲ್ ಕೊರೆಯಿಸಲು ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದೆ. ಕೃಷಿಕರು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಕೃಷಿ ಸಿಂಚಯ ಯೋಜನೆಯ ಇತರೆ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗಳಿಗೆ 25 ಸಾವಿರ ರು. ಸಹಾಯಧನ ಒದಗಿಸಲಾಗುತ್ತಿದೆ. ಕೇಂದ್ರ ಸರ್ಕಾರ ಶೇ. 60 ಹಾಗೂ ರಾಜ್ಯ ಸರ್ಕಾರದ ಶೇ. 40ರ ಅನುಪಾತದಲ್ಲಿ ಯೋಜನೆಯನ್ನು ಕೃಷಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸುತ್ತಿದೆ.ಈ ಸಂದರ್ಭ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವೀರಣ್ಣ, ಕೃಷಿ ಅಧಿಕಾರಿ ಕವಿತಾ, ಪ್ರಮುಖರಾದ ಬಿ.ಬಿ. ಸತೀಶ್, ವಿ.ಎ. ಲಾರೆನ್ಸ್, ಡಿ.ಯು. ಕಿರಣ್, ವಿನಿ, ಮಂಜುನಾಥ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌
ಖಮೇನಿ ಆತ್ಮಕ್ಕೆ ಶಾಂತಿ ದೊರೆಯಲಿ, ಅಮೆರಿಕ ದಾಳಿ ಖಂಡನಾರ್ಹ: ಸಿಎಂ