ಸೋ.ಪೇಟೆ: ಮಣ್ಣು ಪರೀಕ್ಷೆ ಕಾರ್ಯಾಗಾರ

KannadaprabhaNewsNetwork |  
Published : Mar 29, 2024, 12:50 AM IST
ಮಣ್ಣು ಪರೀಕ್ಷೆ ಕುರಿತು ಒಂದು ದಿನದ ಕಾರ್ಯಾಗಾರ | Kannada Prabha

ಸಾರಾಂಶ

ಕಾರ್ಯಕ್ರಮದಲ್ಲಿ ಇ ಕಾಮ್ ಕಂಪನಿಯ ಮುಖ್ಯಸ್ಥ ಡಾ. ಗಲ ರಾಯಪ್ಪ ಅವರು ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತಾರಾಷ್ಟ್ರಿಯ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಇತ್ತೀಚೆಗೆ ಇ ಕಾಮ್ ಕಮಾಡಿಟೀಸ್, ಕಾಫಿ ಮಂಡಳಿ ಮತ್ತು ಭುವನ ಮಂದಾರ ರೈತ ಉತ್ಪಾದಕ ಸಂಸ್ಥೆ ಸಹಯೋಗದೊಂದಿಗೆ ಮಣ್ಣು ಪರೀಕ್ಷೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಇ ಕಾಮ್ ಕಂಪನಿಯ ಮುಖ್ಯಸ್ಥ ಡಾ. ಗಲ ರಾಯಪ್ಪ ಅವರು ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತಾರಾಷ್ಟ್ರಿಯ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಉಪನಿರ್ದೇಶಕರು ಅದ ಡಾ. ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕಾಫಿ ಬೆಳೆಗಾರರಿಗೆ ಕಾಫಿ ಮಂಡಳಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಭುವನ ಮಂದಾರ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಮಾತನಾಡಿ, ಕಾಫಿ ಬೆಳೆಗಾರರಿಗೆ ತಮ್ಮ ತೋಟದ ಮಣ್ಣಿನ ಮಾದರಿಯನ್ನು ಪರೀಕ್ಷಿಸಲು ತಿಳಿಸಿದರು ಹಾಗೂ ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಲು ರೈತರಿಗೆ ಸಲಹೆಯನ್ನು ನೀಡಿದರು.

ಕಾಫಿ ಮಂಡಳಿಯ ಮಣ್ಣು ವಿಜ್ಞಾನಿ ಡಾ. ಎಸ್.ಎ. ನದಾಫ್, ಮಣ್ಣಿನ ಆರೋಗ್ಯವನ್ನು ಕಾಪಾಡಲು ಮತ್ತು ಕಾಫಿ ಇಳುವರಿ ಹೆಚ್ಚಿಸಲು ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸುತ್ತಾ ಆಮ್ಲೀಯ ಮಣ್ಣನ್ನು ಸರಿಪಡಿಸಿಕೊಳ್ಳಲು ಬೇಕಾಗುವ ಕ್ರಮಗಳ ಬಗ್ಗೆ ವಿವರಿಸಿದರು. ಮಣ್ಣಿನ ರಸಸಾರವನ್ನು ಸ್ಥಳದಲ್ಲಿ ಪರೀಕ್ಷೆ ಮಾಡಿ ಸುಣ್ಣವನ್ನು ಶಿಫಾರಸ್ಸು ಮಾಡಿ ವರದಿಯನ್ನು ಸ್ಥಳದಲ್ಲಿ ನೀಡಿದರು.

ಇ-ಕಾಮ್ ಸಂಸ್ಥೆಯ ತಾರಾ ಕಾರ್ಯಕ್ರಮ ನಿರ್ವಹಿಸಿ ಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ