ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಕನ್ನಡಪ್ರಭ ಅರ್ಪಿಸುವ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲಮಾಧ್ಯಮ ಶಾಲೆ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಮಂಗಳವಾರ ಸುಪ್ರಜ ಗುರುಕುಲ ಆಂಗ್ಲಮಾಧ್ಯಮ ಶಾಲೆಯಲ್ಲಿ ಚಿಣ್ಣರು ಅರಣ್ಯ, ವನ್ಯಜೀವಿ ಕುರಿತಂತೆ ವಿವಿಧ ಚಿತ್ರಗಳನ್ನು ರಚಿಸುವ ಮೂಲಕ ಅರಣ್ಯದ ಮಹತ್ವದ ಬಗ್ಗೆ ಸಂದೇಶ ಸಾರಿದರು.
ಕನ್ನಡಪ್ರಭ ಆಯೋಜಿಸಿದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಮೆಚ್ಚುಗೆ ವ್ಯಕ್ತವಾಯಿತು. ಸ್ಪರ್ಧೆಯಲ್ಲಿ ಸೋಮವಾರಪೇಟೆ ತಾಲೂಕಿನ ವಿವಿಧ ಶಾಲೆಯ ಸುಮಾರು 60ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸಿದರು.4 ಮತ್ತು 5ನೇ ತರಗತಿ, 6 ಮತ್ತು 7 ಹಾಗೂ 8ರಿಂದ 10 ನೇ ತರಗತಿ ವರೆಗೆ ಮೂರು ವಿಭಾಗದಲ್ಲಿ ಸ್ಪರ್ಧೆಗಳು ನಡೆದಿದ್ದು, ವಿದ್ಯಾರ್ಥಿಗಳು ಉತ್ಸುಕತೆಯಿಂದ ಪಾಲ್ಗೊಂಡರು.
ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಶನಿವಾರಸಂತೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸರ್ದಾರ್ ಅಹಮದ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕನ್ನಡಪ್ರಭ ಪತ್ರಿಕೆ ಈ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮೊದಲು ಸ್ಪರ್ಧೆಯಲ್ಲಿ ಭಾಗವಹಿಸುವು ಮುಖ್ಯ. ಗೆಲುವು-ಸೋಲು ಮುಖ್ಯವಲ್ಲ ಎಂದು ಕರೆ ನೀಡಿದರು.
ಪ್ಲಾಸ್ಟಿಕ್ ಬಳಸದಂತೆ ಕರೆ:
ಶಿಕ್ಷಣ ಇಲಾಖೆಯ ಸಿ.ಆರ್ .ಪಿ ದಿನೇಶ್ ಮಾತನಾಡಿ ಕನ್ನಡಪ್ರಭ ಪತ್ರಿಕೆ ಮಕ್ಕಳಲ್ಲಿ ಇಂತಹ ಚಟುಚಟಿಕೆ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕುವೆಂಪು ವಿದ್ಯಾಸಂಸ್ಥೆಯ ಉಪನ್ಯಾಸಕ ಲಾಂಚನ್ ಮತ್ತಿತರರು ಪಾಲ್ಗೊಂಡಿದ್ದರು.
-ಪುನಿತ್ , ಡಿ.ಆರ್.ಎಫ್.ಓ ಅರಣ್ಯ ಇದ್ದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದ್ದರಿಂದ ಅರಣ್ಯ ಉಳಿಸುವಲ್ಲಿ ಮಕ್ಕಳ ಪಾತ್ರ ಕೂಡ ಪ್ರಮುಖವಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶವಿದೆ. ಮಕ್ಕಳು ಇಂತಹ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಸೋಮವಾರಪೇಟೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 4 ಮತ್ತು 5ನೇ ತರಗತಿ ವಿಭಾಗದಲ್ಲಿ ಕೊಡ್ಲಿಪೇಟೆ ಎಸ್.ಕೆ.ಎಸ್. ಕಲ್ಮಠ ಶಾಲೆಯ ಮೊಹಮ್ಮದ್ ಝೈಮ್ (ಪ್ರ), ಶನಿವಾರಸಂತೆ ಶ್ರೀ ವಿಘ್ನೇಶ್ವರ ಗೋಲ್ಡನ್ ಶಾಲೆಯ ಎಂ. ಆರ್. ಕನ್ನಿಕಾ(ದ್ವಿ), ಸುಪ್ರಜ ಗುರುಕುಲ ಆಂಗ್ಲಮಾಧ್ಯಮ ಶಾಲೆಯ ಬಿ.ಡಿ. ಧನ್ಯ(ತೃ), ಕೆ.ಎಸ್. ಕೌಶಿಕ್ ಹಾಗೂ ಕೊಡ್ಲಿಪೇಟೆ ಸೇಂಟ್ ಆನ್ಸ್ ಶಾಲೆಯ ಎಂ.ವಿ. ಆಯುಷ್ ಗೌಡ ಸಮಾಧಾನಕರ ಬಹುಮಾನ ಪಡೆದುಕೊಂಡರು.
6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ಕೊಡ್ಲಿಪೇಟೆ ಸೆಂಟ್ ಆನ್ಸ್ ಶಾಲೆಯ ಕೆ.ವೈ. ನೌಶಿಯ(ಪ್ರ), ಎಸ್.ಕೆ.ಎಸ್. ಕಲ್ಮಠ ಶಾಲೆಯ ಅಕ್ಷತಾ ಎಸ್. (ದ್ವಿ), ಕೊಡ್ಲಿಪೇಟೆ ಸೇಂಟ್ ಆನ್ಸ್ ಶಾಲೆಯ ಕೆ.ಡಿ. ದಿಶಾ(ತೃ), ಸುಪ್ರಜ ಗುರುಕುಲ ಶಾಲೆಯ ತೇಜಸ್ ಗೌಡ ಡಿ ಹಾಗೂ ಕಾವೇರಿ ವಿದ್ಯಾಸಂಸ್ಥೆಯ ಸಮೃದ್ಧಿ ಪಿ.ಗೌಡ ಸಮಾಧಾನಕರ ಬಹುಮಾನ ಪಡೆದುಕೊಂಡರು.8ರಿಂದ 10ನೇ ತರಗತಿ ವರೆಗೆ ನಡೆದ ಸ್ಪರ್ಧೆಯಲ್ಲಿ ಭಾರತಿ ವಿದ್ಯಾಸಂಸ್ಥೆಯ ಮೊಹಮ್ಮದ್ ಸಫೀರ್ (ಪ್ರ), ವಿಘ್ನೇಶ್ವರ ಬಾಲಿಕ ಪ್ರೌಢಶಾಲೆಯ ಅಜ್ಮಿಯಾ ಎ.(ದ್ವಿ), ವಿಘ್ನೇಶ್ವರ ಗೋಲ್ಡನ್ ಶಾಲೆಯ ಎಂ.ಪಿ. ಲಕ್ಷ್ಯ(ತೃ), ಕೊಡ್ಲಿಪೇಟೆಯ ಸೇಂಟ್ ಆನ್ಸ್ ಶಾಲೆಯ ಸೂರಜ್ ಹಾಗೂ ಸುಪ್ರಜ ಗುರುಕುಲ ಶಾಲೆಯ ಎಂ.ವಿ. ಯಶಸ್ ಸಮಾಧಾನಕರ ಬಹುಮಾನ ಗಳಿಸಿದರು.