ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕಿ ಪ್ರೇಮಾ ಉದ್ಘಾಟಿಸಿದರು. ನಂತರ ಮಾತನಾಡಿ, ಸಿ.ವಿ. ರಾಮನ್ ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಇಂದು ವಿಜ್ಞಾನ ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿದ್ದು, ದೇಶದಲ್ಲಿ ವಿಜ್ಞಾನ ಬೆಳೆದಂತೆ ಅಭಿವೃದ್ಧಿಯಲ್ಲಿಯೂ ಹೆಚ್ಚಿನ ಸಾಧನೆ ಮಾಡುವುದನ್ನು ಕಾಣಬಹುದಾಗಿದೆ. ಎಲ್ಲರೂ ತಮ್ಮ ಜೀವನದಲ್ಲಿ ಸಿ.ವಿ. ರಾಮನ್ ಆದರ್ಶಗಳನ್ನು ಮೈಗೂಡಿಸಿಕೊಂಡು ಉಜ್ವಲ ದೇಶ ಕಟ್ಟಲು ಮುಂದಾಗಬೇಕೆಂದರು.
ಕಾರ್ಯಕ್ರಮದ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸುವುದರ ಮೂಲಕ ಹಾಗೂ ಪ್ರತಿಜ್ಞಾವಿಧಿಯನ್ನು ವೈಚಾರಿಕ ಮನೋಭಾವನೆ ಬೆಳೆಸುವ ಹಿನ್ನೆಲೆಯಲ್ಲಿ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ರಾಣಿ, ರವೀಂದ್ರ ಸೇರಿದಂತೆ ಶಿಕ್ಷಕರು ಹಾಜರಿದ್ದರು.ಐಗೂರು ಪ್ರೌಢಶಾಲೆ:ತಾಲೂಕಿನ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು.
ಶಾಲಾ ಶಿಕ್ಷಕರಾದ ಎಸ್.ಕೆ.ರಾಜರತ್ನ, ಮಂಜುನಾಥ್, ಗುಲಾಬಿ ಪಾಲ್ಗೊಂಡಿದ್ದರು.
ಶಾಲಾ ವಿದ್ಯಾರ್ಥಿಗಳು ವಿಜ್ಞಾನ ಗೀತೆಗಳನ್ನು ಹಾಡಿದರು. ರಾಮನ್ ಪರಿಣಾಮ ಮತ್ತು ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಯೋಗ ಪ್ರಾತ್ಯಕ್ಷಿಕೆ ನಡೆಸಲಾಯಿತು. 22 ತಂಡಗಳು ಭಾಗವಹಿಸಿದ್ದವು. ಉತ್ತಮ ಪ್ರಾತ್ಯಕ್ಷಕೆ ನೀಡಿದ ಮೂರು ತಂಡಗಳಿಗೆ ಬಹುಮಾನ ನೀಡಲಾಯಿತು.