ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ನೈಋತ್ಯ ರೈಲ್ವೇ ಜಿಎಂ ಭೇಟಿ

KannadaprabhaNewsNetwork |  
Published : Nov 18, 2025, 02:15 AM IST
 ಮುಕುಲ್ ಶರಣ್ ಮಾಥುರ್ ಅವರು ಭೇಟಿ ನೀಡಿ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು | Kannada Prabha

ಸಾರಾಂಶ

ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ನೈಋತ್ಯ ರೈಲ್ವೇ ಪ್ರಧಾನ ವ್ಯವಸ್ಥಾಪಕ ಮುಕುಲ್ ಶರಣ್ ಮಾಥುರ್ ಶುಕ್ರವಾರ ಭೇಟಿ ನೀಡಿ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ, ಬಳಕೆದಾರರ ಅಹವಾಲು ಆಲಿಸಿದರು.

ಸುಬ್ರಹ್ಮಣ್ಯ: ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ನೈಋತ್ಯ ರೈಲ್ವೇ ಪ್ರಧಾನ ವ್ಯವಸ್ಥಾಪಕ ಮುಕುಲ್ ಶರಣ್ ಮಾಥುರ್ ಶುಕ್ರವಾರ ಭೇಟಿ ನೀಡಿ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ, ಬಳಕೆದಾರರ ಅಹವಾಲು ಆಲಿಸಿದರು.

ಅವರು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ನಿಲ್ದಾಣದಲ್ಲಿ ಪ್ರಯಾಣಿಕ ಸೌಲಭ್ಯಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸೇವಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಅಂಶಗಳನ್ನು ಅವಲೋಕಿಸಿದರು. ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಪ್ರಧಾನ ವ್ಯವಸ್ಥಾಪಕರು ಸಕಲೇಶಪುರ ಘಾಟ್ ಸೆಕ್ಷನ್‌ನ ವಿದ್ಯುತ್ತಿಕರಣ ಕಾರ್ಯಗಳನ್ನೂ ಪರಿಶೀಲಿಸಿದರು. ಹೊಸದಾಗಿ ವಿದ್ಯುದೀಕೃತಗೊಳ್ಳುತ್ತಿರುವ ಭಾಗದ ಸಿದ್ಧತೆ ಹಾಗೂ ಭದ್ರತಾ ಮಾನದಂಡ ಪರಿಶೀಲಿಸಿದರು. ಸುಬ್ರಹ್ಮಣ್ಯ ರಸ್ತೆ ಮತ್ತು ಹಾಸನ ನಡುವಿನ ವಿಭಾಗದಲ್ಲಿ ವಿಂಡೋ ಟ್ರಯಾಂಗಲ್‌ ಪರಿಶೀಲನೆ ನಡೆಸಲಾಗಿದ್ದು, ರೈಲ್ವೆ ಹಳಿಗಳ ಸ್ಥಿತಿ, ಸಿಗ್ನಲ್ ವ್ಯವಸ್ಥೆಗಳು ಹಾಗೂ ಸುರಕ್ಷತೆ ಮತ್ತು ಸುಗಮ ರೈಲು ಸಂಚಾರಕ್ಕೆ ಅಗತ್ಯವಿರುವ ಇತರೆ ಕಾರ್ಯಾಚರಣಾ ಅಂಶಗಳ ಮೌಲ್ಯಮಾಪನ ಮಾಡಿದರು.

ಜಿಎಂ ಅವರನ್ನು ಭೇಟಿ ಮಾಡಿದ ರೈಲ್ವೇ ಬಳಕೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ - ಮಂಗಳೂರು ರೈಲು ಬಳಕೆದಾರರ ಹಿತರಕ್ಷಣಾ ವೇದಿಕೆ ಪುತ್ತೂರು ಸಂಚಾಲಕ ಸುದರ್ಶನ್ ಪುತ್ತೂರು, ನೆಟ್ಟಣ ರೈಲು ಬಳಕೆದಾರರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಜಿ. ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ