ಕನ್ನಡಪ್ರಭ ವಾರ್ತೆ ಉಡುಪಿ ತೆಲಂಗಾಣದ ವಾರಂಗಲ್ ನಲ್ಲಿ ನಡೆದ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ನಲ್ಲಿ ಉಡುಪಿಯ ಯುನೈಟೆಡ್ ಅಥ್ಲೆಟಿಕ್ಸ್ ನ ಅನುರಾಗ್ ಜಿ. ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ ಅವರು ಕಾರ್ಕಳ ಬಿಎಸ್ಎನ್ಎಲ್ ಉದ್ಯೋಗಿ ಗುರುರಾಜ ಮತ್ತು ಉಡುಪಿ ಜಿಲ್ಲಾ ಅಸ್ಪತ್ರೆಯ ನರ್ಸಿಂಗ್ ಅಧಿಕಾರಿ ರಮಣಿ ದಂಪತಿ ಪುತ್ರ. ಅಂತಾರಾಷ್ಟ್ರೀಯ ಕ್ರೀಡಾಪಟು ಶಾಲಿನಿ ರಾಜೇಶ್ ಶೆಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.