ಕನ್ನಡಪ್ರಭ ವಾರ್ತೆ ಮಂಡ್ಯ
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಿಂತಕ ಜಾಣಗೆರೆ ವೆಂಕಟರಾಮಯ, ಡಾ.ಎಸ್.ಜಿ.ಸಿದ್ದರಾಮಯ್ಯ, ಸಾಹಿತಿ, ಡಾ.ಬಂಜಗೆರೆ ಜಯಪ್ರಕಾಶ್, ಡಾ.ಬೈರಮಂಗಲ ರಾಮೇಗೌಡ ಇತರರು, ಶಿಕ್ಷಣ ಪ್ರಜಾಸತ್ತಾತ್ಮಕವಾಗಿ ಇರಬೇಕು ಎನ್ನುವ ನಿಟ್ಟಿನಲ್ಲಿ ಮರಿತಿಬ್ಬೇಗೌಡರ ಆಯ್ಕೆ ಅನಿವಾರ್ಯ ಎಂದರು.
ಪ್ರಜಾಸತ್ತಾತ್ಮಕ ಉಳಿಸಲು, ಉಚಿತ ಕಡ್ಡಾಯ ಶಿಕ್ಷಣದ ಗುರಿ ಈಡೇರಲು, ಎಲ್ಲ ಸಮುದಾಯಗಳು ಸೌಹಾರ್ದದಿಂದ ಬದುಕಲು ನಾವು ಕಾಂಗ್ರೆಸ್ ಬೆಂಬಲಿಸುತ್ತಿರುವುದಾಗಿ ತಿಳಿಸಿದರು.ಹೊಸ ಶಿಕ್ಷಣ ನೀತಿ ನಮ್ಮನ್ನು ನೂರು ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ. ಇದರ ಹಿಂದೆ ಹಿಡನ್ ಅಜೆಂಡಾ ಅಡಗಿದೆ. ಇದನ್ನು ಎಲ್ಲರೂ ವಿರೋಧಿಸಬೇಕು. ಇಲ್ಲದಿದ್ದಲ್ಲಿ ನಮ್ಮ ಮಕ್ಕಳಿಗೆ ತಳ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗ ಸಿಗುವುದಿಲ್ಲ ಎಂದು ಎಚ್ಚರಿಸಿದರು.
ಸಾಹಿತಿ ಪ್ರೊ.ಮುಕುಂದರಾಜು ಮಾತನಾಡಿ, ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ ತರುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಲಿಸಿದೆ. ಇದರಿಂದ ಹಿಂದುಳಿದವರಿಗೆ ಭವಿಷ್ಯ ಇಲ್ಲದಂತೆ ಆಗಿದೆ. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ನುಡಿದರು.
ಸುದ್ದಿಗೋಷ್ಠಿಯಲ್ಲಿ ಸಾಹಿತಿ ಕಾ.ತ.ಚಿಕ್ಕಣ್ಣ , ಕರ್ನಾಟಕ ಬಂಜಾರ ಅಭಿವೃದ್ಧಿ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.ಅಹಿಂದ ವರ್ಗದ ಶಿಕ್ಷಕರು ಮರಿತಿಬ್ಬೇಗೌಡರನ್ನು ಬೆಂಬಲಿಸಬೇಕು: ಎಂ.ಎಲ್ .ಸುರೇಶ್ಮಂಡ್ಯ:ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರನ್ನು ಅಹಿಂದ ವರ್ಗದ ಶಿಕ್ಷಕರು ಬೆಂಬಲಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿರಿಯ ಉಪಾಧ್ಯಕ್ಷ ಎಂ.ಎಲ್.ಸುರೇಶ್ ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಜೂ.3ರ ಚುನಾವಣೆಯಲ್ಲಿ ಮಂಡ್ಯ, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಅಹಿಂದ ಮತದಾರರು ಮೊದಲ ಪ್ರಾಶಸ್ತ್ಯದ ಮತವನ್ನು ಮರಿತಿಬ್ಬೇಗೌಡರಿಗೆ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.