ನಾಳೆಯಿಂದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ

KannadaprabhaNewsNetwork |  
Published : Jan 29, 2026, 01:45 AM IST
ಕ್ಯಾಪ್ಷನ28ಕೆಡಿವಿಜಿ43 ದಾವಣಗೆರೆಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜ.30ರಿಂದ ಫೆ.13ರವರೆಗೆ ಜಿಲ್ಲೆಯಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ -2026 ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್ ಹೇಳಿದ್ದಾರೆ.

- ‘ತಾರತಮ್ಯ ಕೊನೆಗೊಳಿಸುವುದು, ಘನತೆ ಕಾಪಾಡುವುದು’ ಘೋಷವಾಕ್ಯ: ಸಿಇಒ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜ.30ರಿಂದ ಫೆ.13ರವರೆಗೆ ಜಿಲ್ಲೆಯಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ -2026 ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ತಾರತಮ್ಯವನ್ನು ಕೊನೆಗೊಳಿಸುವುದು ಘನತೆಯನ್ನು ಕಾಪಾಡುವುದು’ ಈ ವರ್ಷದ ಘೋಷವಾಕ್ಯವಾಗಿದೆ ಎಂದರು.

ಕುಷ್ಠರೋಗ ಬಗ್ಗೆ ಅರಿವು ಮೂಡಿಸುವುದು ಆಂದೋಲನ ಉದ್ದೇಶವಾಗಿದೆ. ಕುಷ್ಠವನ್ನು ಆದಷ್ಟು ಬೇಗ ಪತ್ತೆ ಹಚ್ಚುವುದು ಹಾಗೂ ಚಿಕಿತ್ಸೆ ನೀಡುವ ಗುರಿ ಹೊಂದಲಾಗಿದೆ. ಸಮುದಾಯದಲ್ಲಿ ಅರಿವು ಮೂಡಿಸಬೇಕು. ಉಂಟಾಗಬಹುದಾದ ಅಂಗವಿಕಲತೆ ತಪ್ಪಿಸಬೇಕು. ರೋಗಿಗಳು ಚಿಕಿತ್ಸೆಯನ್ನು ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ನೆಲೆಸಿರುವವರು, ಕುಷ್ಠರೋಗಿಗಳೊಂದಿಗೆ ಸಂಪರ್ಕ ಹೊಂದಿದವರು, ಶಾಲೆ-ಕಾಲೇಜಿನ ವಿದ್ಯಾರ್ಥಿಗಳು, ನಗರದ ಸ್ಲಂ ಪ್ರದೇಶಗಳಲ್ಲಿ ವಾಸಿಸುವವರಿಗೆ ಕುಷ್ಠರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅವರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಬೇಕು. ರೋಗಿಗಳನ್ನು ಗುರುತಿಸುವುದು ಹಾಗೂ ಚಿಕಿತ್ಸೆ ನೀಡುವುದಕ್ಕೆ ಕಾರ್ಮಿಕರ ವಲಸೆಯು ಸವಾಲಾಗಿದೆ ಎಂದು ಹೇಳಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪಿ.ಡಿ. ಮುರಳೀಧರ ಮಾತನಾಡಿ, ಕುಷ್ಠರೋಗವು ಬ್ಯಾಕ್ಟೀರಿಯಾದಿಂದ ಬರುವಂತಹ ಕಾಯಿಲೆ. ಕಾಯಿಲೆ ಹರಡುವುದನ್ನು ತಪ್ಪಿಸಲು ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. 400 ರಿಂದ 500 ವರ್ಷಗಳ ಇತಿಹಾಸವಿರುವ ಕಾಯಿಲೆ ಇದಾಗಿದೆ. ಆರಂಭಿಕ ಹಂತದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ತಿಳಿಸಿದರು.

5ರಿಂದ 10 ವರ್ಷಗಳ ಚಿಕಿತ್ಸೆ ಅಗತ್ಯತೆ ಇರುತ್ತದೆ. ರೋಗಿಗಳಿಗೆ ಉಚಿತ ಔಷಧಿ ಮತ್ತು ಕಿಟ್ ನೀಡಲಾಗುವುದು. ಕುಷ್ಠರೋಗದ ಬಗ್ಗೆ ಗ್ರಾಮಗಳಲ್ಲಿ ಅರಿವು ಮೂಡಿಸಲು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ. ಒಬ್ಬ ಕುಷ್ಠರೋಗಿಯನ್ನು ಪತ್ತೆ ಹಚ್ಚಿದರೆ ಆಶಾ ಕಾರ್ಯಕರ್ತೆಯರಿಗೆ ₹600 ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ತಾಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಭಾಗವಹಿಸಿದ್ದರು.

- - -

-28ಕೆಡಿವಿಜಿ43:

ದಾವಣಗೆರೆಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ