ಕೂಡ್ಲಿಗಿ: ವ್ಯವಹಾರಿಕ ಭಾಷೆಯಾಗಿ ಎಲ್ಲ ಕಡೆ ಕನ್ನಡ ಮಾತನಾಡುವುದರ ಮೂಲಕ ಗೌರವ ಸಲ್ಲಿಸಬೇಕು ಎಂದು ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಕರೆ ನೀಡಿದರು.
ನಮ್ಮ ನೆಲದಲ್ಲಿ ಕನ್ನಡ ಪಸರಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಕನ್ನಡಿಗರಾದ ನಮ್ಮ ಹೃದಯದಲ್ಲಿ ಕನ್ನಡದ ಜ್ಯೋತಿ ಬೆಳಗಬೇಕು. ಅದಕ್ಕಾಗಿ ಕೂಡ್ಲಿಗಿ ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಈಗಾಗಲೇ ಜಾಗ ಕಾಯ್ದಿರಿಸಿದೆ. ಅದಕ್ಕೆ ಒಂದು ಕೋಟಿ ರು. ಅನುದಾನ ಮಂಜೂರು ಮಾಡಿಸಲಾಗಿದೆ. ನಾನು ಶಾಸಕನಾಗಿ ಎರಡೂವರೆ ವರ್ಷದಲ್ಲಿ ₹1300 ಕೋಟಿ ಅನುದಾನ ತಂದು ಅಭಿವೃದ್ಧಿಗೆ ಪೂರಕವಾಗಿ ಕ್ಷೇತ್ರದ ಜನತೆಯ ನಂಬಿಕೆ, ಶಕ್ತಿ, ಪ್ರೀತಿಗೆ ಸಾಕ್ಷಿಯಾಗಿದ್ದೇನೆ ಎಂದರು.
ನ.೯ರಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ತಾಲೂಕಿನ ೭೪ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಲೋಕಾರ್ಪಣೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.ಪಟ್ಟಣದ ಮಹದೇವ ಮೈಲಾರ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಶಾಸಕ ಡಾ.ಶ್ರೀನಿವಾಸ್ ಎನ್.ಟಿ ಮತ್ತು ತಹಸಿಲ್ದಾರ್ ಹಾಗೂ ಅಧಿಕಾರಿವರ್ಗ, ಸಂಘಟನೆಯವರು ಪುಷ್ಪ ನಮನ ಸಲ್ಲಿಸಿದರು.
ಧ್ವಜ ಕಟ್ಟೆಯ ಕೆಳಭಾಗದಲ್ಲಿ ರಾಷ್ಟ್ರ ನಾಯಕರ ಭಾವಚಿತ್ರಗಳು ಇದ್ದರೂ ಅದರ ಪರಿವಿಲ್ಲದೇ ಶಾಸಕರ ಜೊತೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.