ವಿಶೇಷ ಮಕ್ಕಳ ಕ್ರೀಡಾಕೂಟ: ಕಾರ್ಕಳ ವಿಜೇತ ಶಾಲೆ ಚಾಂಪಿಯನ್‌

KannadaprabhaNewsNetwork |  
Published : Nov 30, 2024, 12:51 AM IST
29ವಿಜೇತ | Kannada Prabha

ಸಾರಾಂಶ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಡುಪಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆ ವತಿಯಿಂದ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಡುಪಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆ ವತಿಯಿಂದ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.ಈ ಕ್ರೀಡಾಕೂಟದಲ್ಲಿ ವಿಜೇತ ವಿಶೇಷ ಶಾಲೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಒಟ್ಟು ೪೭ ವಿದ್ಯಾರ್ಥಿಗಳು ಭಾಗವಹಿಸಿದ್ದು, 19 ಚಿನ್ನದ ಪದಕ, 30 ಬೆಳ್ಳಿ ಪದಕ ಹಾಗೂ 19 ಕಂಚಿನ ಪದಕಗಳನ್ನು ಸೇರಿ ೬೮ ಪದಕಗಳನ್ನು ಗೆದ್ದುಕೊಂಡಿದ್ದಾರೆ ಮತ್ತು ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ ಶೆಟ್ಟಿ ಪ್ರಶಸ್ತಿಗಳನ್ನು ವಿತರಿಸಿದರು. ರಾಜ್ಯ ವಿಶೇಷ ಶಿಕ್ಷಕ/ ಶಿಕ್ಷಕೇತರರ ಸಂಘ ರಾಜ್ಯಾಧ್ಯಕ್ಷೆ, ವಿಜೇತ ಶಾಲೆಯ ಸಂಸ್ಥಾಪಕಿ ಡಾ. ಶಾಂತಿ ಹರೀಶ್, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಆಗ್ನೇಸ್ ಕುಂದರ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''