ಕನ್ನಡಪ್ರಭ ವಾರ್ತೆ ಬೀದರ್
ಜಿಲ್ಲಾಧ್ಯಕ್ಷ ಪಾಂಡುರಂಗ ಬೆಲ್ದಾರ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ನಗರದಲ್ಲಿ ನಿಯೋಗದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕಲಬುರಗಿ ಹೆಚ್ಚುವರಿ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ಇಲಾಖೆಯ ಅಧಿಕಾರಿ ಶಿವಲಿಂಗಪ್ಪ ಹಿರೇಮನಿಗೆ ಸಲ್ಲಿಸಿದರು.
ಏ.10ರಿಂದ ಮೇ 28ರ ವರೆಗೆ ರಜೆ ಅವಧಿ ಇದ್ದರೂ ಶಿಕ್ಷಕರು ಮೇ 7ರ ವರೆಗೆ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಹಾಗೂ ಲೋಕಸಭೆ ಚುನಾವಣೆ ಕೆಲಸ ನಿರ್ವಹಿಸಿದ್ದಾರೆ. ಇದೀಗ ಉಳಿದ ರಜೆ ಅವಧಿಯಲ್ಲೂ ತರಗತಿ ನಡೆಸಲು ಸೂಚಿಸಿರುವುದು ಶಿಕ್ಷಕರಿಗೆ ಆಘಾತ ಉಂಟು ಮಾಡಿದೆ ಎಂದು ಹೇಳಿದರು.ಇಲಾಖೆ ಕ್ರಮ ಶಿಕ್ಷಕರ ಮೇಲೆ ಒತ್ತಡ ಹೇರುವಂಥದ್ದಾಗಿದೆ. ಇದು, ಕೆಲ ದಿನಗಳಾದರೂ ನೆಮ್ಮದಿಯಿಂದ ರಜೆ ಕಳೆಯ ಬಯಸಿದ್ದ ಶಿಕ್ಷಕರ ಮಾನಸಿಕ ಸ್ಥಿತಿ ಮೇಲೆ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಂಘದ ಜಿಲ್ಲಾ ಗೌರವಾಧ್ಯಕ್ಷ ಕಲಾಲ್ ದೇವಿಪ್ರಸಾದ್, ಉಪಾಧ್ಯಕ್ಷ ಸೂರ್ಯಕಾಂತ ಶಿಂಗೆ, ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪ ಚಟ್ನಾಳೆ, ಸಹ ಕಾರ್ಯದರ್ಶಿ ಬಲವಂತರಾವ್ ರಾಠೋಡ್, ಬೀದರ್ ತಾಲೂಕು ಘಟಕದ ಅಧ್ಯಕ್ಷ ಎಂ.ಡಿ. ಶಹಾಬೊದ್ದಿನ್, ಬಾಬುರಾವ್ ಮಾಳಗೆ, ಅನಿಲಕುಮಾರ ಶೇರಿಕಾರ್, ಸುಭಾಷ್ ಚೌಹಾಣ್, ರಘುನಾಥರಾವ್ ಭೂರೆ ನಿಯೋಗದಲ್ಲಿ ಇದ್ದರು.