ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಜೆಎಲ್ ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಅಹಿಂದ ಚಳವಳಿ ಸಂಘಟನೆಯು ಶನಿವಾರ ಆಯೋಜಿಸಿದ್ದ
ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಜಾಗೃತಿ ಸಭೆಯಲ್ಲಿ ಅವರು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕುಸಿತ- ಚುನಾವಣಾ ಆಯೋಗದ ದುರುಪಯೋಗ, ಮನರೇಗಾ ಉದ್ಯೋಗ ಖಾತ್ರಿ ಯೋಜನೆ ಕಳವಳಗಳು ಕುರಿತು ಮಾತನಾಡಿದರು.ಎಸ್ಐಆರ್ ಎಂದರೆ ಕೇವಲ ಮತಪಟ್ಟಿಯ ತೀವ್ರ ಪರಿಷ್ಕರಣೆ ಮಾತ್ರವಲ್ಲ, ಅಷ್ಟೇ ಆಗಿದ್ದರೆ ಇದಕ್ಕೆ ಯಾರ ವಿರೋಧವೂ ಇರುತ್ತಿರಲಿಲ್ಲ. ಸರ್ಕಾರವೇ ಯಾರು ಮತ ಹಾಕಬೇಕು ಎಂಬುದನ್ನು ಆಯ್ಕೆ ಮಾಡುವ ವಿಕೃತ, ಫ್ಯಾಸಿಸ್ಟ್ ಪ್ರಕ್ರಿಯೆಯಾಗಿದೆ ಎಂದು ದೂರಿದರು.
ಅಹಿಂದ ಚಳವಳಿ ರಾಜ್ಯ ಮುಖ್ಯ ಸಂಚಾಲಕ ಎಸ್. ಮೂರ್ತಿ ಮಾತನಾಡಿ, ಸಂವಿಧಾನ ಅನುಷ್ಠಾನಕ್ಕೆ ಬಂದ ದಿನ ದೆಹಲಿಯಲ್ಲಿ ಕೆಲವರು ಸಂವಿಧಾನದ ಪ್ರತಿ ಸುಟ್ಟರು. ಮನುಸ್ಮೃತಿ ಸಂವಿಧಾನವಾಗಬೇಕಿತ್ತು ಎಂದಿದ್ದರು. ಇಂದು ಅವರೇ ಈ ದೇಶವನ್ನು ಆಳುತ್ತಿದ್ದಾರೆ. ಬಹುಸಂಖ್ಯಾತರಾದ, ಸ್ವಾತಂತ್ರ್ಯಕ್ಕಾಗಿ ಪ್ರಾಣ ಸಮರ್ಪಿಸಿದ ವರ್ಗದ ನಾವು ಕೆಲವರ ದೃಷ್ಟಿಯಲ್ಲಿ ದೇಶದ್ರೋಹಿಗಳಂತೆ ಕಾಣುತ್ತಿದ್ದೇವೆ ಎಂದರು.
ದಸರಾ ವೆಚ್ಚ ಬಹಿರಂಗಗೊಳಿಸಲು ಆಗ್ರಹ
ಕಳೆದ ವರ್ಷದ ನಡೆದ ಮೈಸೂರು ದಸರಾ ಮಹೋತ್ಸವದ ವೆಚ್ಚವನ್ನು ಬಹಿರಂಗಪಡಿಸದಿರುವ ಜಿಲ್ಲಾಡಳಿತ ಹಾಗು ರಾಜ್ಯ ಸರಕಾರದ ಕ್ರಮ ಹಲವು ಸಂಶಯಗಳಿಗೆ ಕಾರಣವಾಗಿದೆ ಎಂದು ಬಿಜೆಪಿ ಮುಖಂಡ ಡಾ. ಸುಶ್ರುತ ಗೌಡ ಆರೋಪಿಸಿದ್ದಾರೆ.
ದಸರಾಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಮೊತ್ತ, ಟಿಕೆಟ್ ಮಾರಾಟ, ಪ್ರಯೋಜಕತ್ವದಲ್ಲಿ ದೊರೆತ ಮೊತ್ತ, ಖರ್ಚಾದ ಹಣದ ಬಗ್ಗೆ ಯಾವುದೇ ಮಾಹಿತಿಯನ್ನು ಈವರೆಗೆ ಸಂಬಂಧಿಸಿದ ಅಧಿಕಾರಿಗಳು ಬಿಡುಗಡೆ ಮಾಡಿಲ್ಲ. ದಸರಾದಲ್ಲಿ ಹಣ ದೋಚುವುದೇ ಕೆಲವರಿಗೆ ಲಾಭದಾಯಕ ಉದ್ಯಮವಾಗಿದೆ. ಇದನ್ನು ತಡೆಗಟ್ಟಬೇಕಾದರೆ ಖರ್ಚು ವೆಚ್ಚಗಳಲ್ಲಿ ಪಾರದರ್ಶಕತೆ ಅಗತ್ಯ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಈ ಪಾರದರ್ಶಕತೆ ಮಾಯವಾಗಿದೆ ಎಂದು ಅವರು ದೂರಿದ್ದಾರೆ.