ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ದೇವಾಲಯದ ಮುಖ್ಯ ಅರ್ಚಕ ಲಕ್ಷ್ಮೀಶ್ ಅವರ ತಂಡ ಗುರುವಾರ ರಾತ್ರಿಯಿಂದಲೇ ದೇವಾಲಯದಲ್ಲಿ ವಿವಿಧ ಬಗೆಯ ಹೂಗಳಿಂದ ಗರ್ಭ ಗುಡಿ ಸೇರಿದಂತೆ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.
ದೇವಾಲಯದ ಪಕ್ಕದಲ್ಲಿ ಹೋಮ, ಹವನಗಳ ನಡೆಸಿ ಶುಕ್ರವಾರ ಲೋಕ ಕಲ್ಯಾಣಾರ್ಥ ಪ್ರಾರ್ಥಿಸಿದರು. ಪಟ್ಟಣ ಮಾತ್ರವಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಪುನೀತರಾದರು. ಬಂದ ಭಕ್ತರಿಗೆ ಮಂಗಳಾರತಿ, ತೀರ್ಥ, ಪ್ರಸಾದ ವಿತರಿಸಲಾಯಿತು.ಪ್ರಸಿದ್ಧ ಗಂಜಾಂನ ಶ್ರೀನಿಮಿಷಾಂಭಾ ದೇವಾಲಯದಲ್ಲಿ ದೇವಾಲಯದ ಮುಖ್ಯ ಅರ್ಚಕ ಸೂರ್ಯನಾರಾಯನಭಟ್ ನೇತೃತ್ವದಲ್ಲಿ ವಿಶೇಷ ಅಲಂಕಾರದೊಂದಿಗೆ ಪೂಜೆಗಳ ನೆರವೇರಿಸಲಾಗಿತ್ತು. ಸಾವಿರಾರು ಮಂದಿ ವಿವಿಧೆಡೆಯಿಂದ ಭಕ್ತರು ಆಗಮಿಸಿ ಸರತಿ ಸಾಲಿನಿಲ್ಲಿ ನಿಂತು ದೇವಿ ದರ್ಶನ ಪಡೆದರು. ಬಂದ ಭಕ್ತರಿಗೆ ಮಹಾ ಮಂಗಳಾರತಿ, ತೀರ್ಥ- ಪ್ರಸಾದವನ್ನು ನೀಡಿ ದೇವಾಲಯಕ್ಕೆ ಬಂದ ಭಕ್ತರೆಲ್ಲರಿಗೂ ವಿಶೆಷ ಸಿಹಿಯೊಂದಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.