ಕನ್ನಡಪ್ರಭ ವಾರ್ತೆ ಪಾಂಡವಪುರ
ಶಾಲಾ ಆವರಣದಿಂದ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರ ಜೊತೆಗೂಡಿ ಗ್ರಾಮದಲ್ಲಿ ಆರಂಭವಾದ ಜಾಥಾ ಗ್ರಾಮದ ಪ್ರತಿಬೀದಿ ಮನೆಗಳಿಗೆ ತೆರಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ದೊರೆಯುವ ಸೌಲಭ್ಯಗಳ ಕುರಿತ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಿದರು.
ವಿಶೇಷ ಜಾಥಾಗೆ ಕ್ಷೇತ್ರ ಶಿಕ್ಷಣಾಕಾರಿ ಧರ್ಮಶೆಟ್ಟಿ ಚಾಲನೆ ನೀಡಿ ಮಾತನಾಡಿ, ಯಾವುದೇ ಮಕ್ಕಳು ಶಾಲೆಯಿಂದ ಹೊರೆಗೆ ಉಳಿಯಬಾರದು ಹಾಗೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಮಾಡುವ ಉದ್ದೇಶದಿಂದ ಮುಖ್ಯಶಿಕ್ಷಕರು ದಾಖಲಾತಿ ಆಂದೋಲನ ನಡೆಸುತ್ತಿದ್ದಾರೆ ಎಂದರು.ಸರ್ಕಾರದಿಂದ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳು ದೊರೆಯುತ್ತಿವೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೋಷಕರು ಲಕ್ಷಾಂತರ ರು. ನೀಡಿ ಖಾಸಗಿ ಶಾಲೆಗೆ ದಾಖಲಿಸುವ ಬದಲು ಸರ್ಕಾರಿ ಶಾಲೆಗೆ ದಾಖಲಿಸಿ ಎಂದರು.
ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಕರಪತ್ರವನ್ನು ಪ್ರತಿ ಮನೆಗೆ ನೀಡಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಇಂಗ್ಲಿಷ್ ಕಲಿಕೆಗೂ ಆದ್ಯತೆ ನೀಡಲಾಗಿದೆ. ಕಳೆದ ಮೂರು ವರ್ಷಗಳಿಂದಲೂ ಗ್ರಾಮದಲ್ಲಿ ವಿಶೇಷ ದಾಖಲಾತಿ ಆಂದೋಲನ ನಡೆಸಿಕೊಂಡು ಬರುತ್ತಿದ್ದೇವೆ. ಈ ವರ್ಷ ಶಾಲೆಗೆ ದಾಖಲಾಗುವ ಪ್ರತಿ ಮಗುವಿಗೂ ವೈಯುಕ್ತಿಕವಾಗಿ ಒಂದು ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು, ದಾಖಲಾಗುವ ಮಕ್ಕಳು ಕಡ್ಡಾಯವಾಗಿ 5ನೇ ತರಗತಿಯವರೆಗೂ ಶಾಲೆಯಲ್ಲಿ ಓದಬೇಕು ಎಂದರು.