ಕನ್ನಡಪ್ರಭ ವಾರ್ತೆ ಶ್ರೀಮಂಗಲ
ಕೊಡವ ಜನಾಂಗಕ್ಕೆ ಮತ್ತು ಜಮ್ಮಾ ಹಿಡುವಳಿದಾರರಿಗೆ ನೀಡಿದ್ದ ವಿಶೇಷ ಕೋವಿ ವಿನಾಯಿತಿ ಹಕ್ಕನ್ನು ಪ್ರಶ್ನಿಸಿದ್ದ ವಿಚಾರವಾಗಿ ನಾನು ಸೇರಿದಂತೆ ಜನಾಂಗದ ಹಲವಾರು ಪ್ರಮುಖ ವಕೀಲರು ಹಕ್ಕನ್ನು ಉಳಿಸಿಕೊಳ್ಳುವ ಬಗೆ ನ್ಯಾಯಲಯಕ್ಕೆ ಮನವರಿಕೆ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ 2019ರಲ್ಲಿ ಹಳೆಯ ನೋಟಿಫಿಕೇಶನ್ ತಿದ್ದುಪಡಿ ಮಾಡಿ ಹೊಸ ನೋಟಿಫಿಕೇಶನ್ ಹೊರಡಿಸಿ ಮುಂದಿನ 10 ವರ್ಷಕ್ಕೆ ಸೀಮಿತವಾಗುವಂತೆ ಅಂದರೆ 2029 ರವರೆಗೆ ಮಾತ್ರ ವಿಶೇಷ ಕೋವಿ ವಿನಾಯಿತಿ ಹಕ್ಕು ಇರುತ್ತದೆ. ಆದರೆ ಇಂತಹ ಶಾಶ್ವತವಾಗಿದ್ದ ವಿನಾಯಿತಿ ಹಕ್ಕು ಹೇಗೆ ಬದಲಾಯಿತು. ಈ ಬಗ್ಗೆ ನಾವು ಯಾವುದೇ ಹೋರಾಟವನ್ನು ಮಾಡಲಿಲ್ಲ ಹಾಗೂ ಅದನ್ನು ಪ್ರಶ್ನೆಯನ್ನು ಸಹ ಮಾಡಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು ಇಂತಹ ಪ್ರಮುಖ ವಿಚಾರದ ಬಗ್ಗೆ ನಾವು ಪ್ರಶ್ನೆ ಮಾಡುವ ಶಕ್ತಿಯನ್ನೇ ಕಳೆದುಕೊಂಡರೆ ಸಂಸ್ಕೃತಿ ಉಳಿಯುವುದಿಲ್ಲ. ನಾಳೆ ನಮ್ಮ ಮಕ್ಕಳು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು.
ಆಚಾರ ವಿಚಾರಗಳಿಗೆ ಧಕ್ಕೆ:ಇನ್ನೂ ಮೂರು ವರ್ಷಕ್ಕೆ ನಮ್ಮ ಕೋವಿ ಹಕ್ಕು ಸೀಮಿತವಾಗಲಿದೆ, ಕೊಡವ ಮತ್ತು ಜಮ್ಮಾ ಹಿಡುವಳಿದಾರರ ಸಂಸ್ಕೃತಿ ಆಚಾರ ವಿಚಾರಗಳಲ್ಲಿ ಪ್ರಮುಖವಾಗಿರುವ ಕೋವಿ ಹಕ್ಕು, ಮೊಟಕುಗೊಂಡರೆ ನಮ್ಮ ಹಕ್ಕು ನಮ್ಮ ಸಂಸ್ಕೃತಿ ಆಚಾರ ವಿಚಾರಗಳಿಗೆ ಧಕ್ಕೆ ಉಂಟಾಗಲಿದೆ. ಇಂತಹ ವಿಚಾರದ ಬಗ್ಗೆ ಒಗ್ಗಟ್ಟಾಗಿ ಪ್ರಶ್ನೆ ಮಾಡಬೇಕು ಹಾಗೂ ಅದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಖಿಲ ಕೊಡವ ಸಮಾಜ, ಕೊಡವ ಸಮಾಜಗಳು, ಸಂಘ ಸಂಸ್ಥೆಗಳು ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.
ಆಂತರಿಕವಾಗಿ ನಂಬಿಕೆ ಇರಬೇಕು:
ಪ್ರಾಸ್ತವಿಕವಾಗಿ ಮಾತನಾಡಿದ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈಬುಲಿರ ಹರೀಶ್ ಅಪ್ಪಯ್ಯ ಅವರು ಕಳೆದ 9 ವರ್ಷಗಳಿಂದ ಪತ್ತಾಲೋದಿಯ 10 ದಿನದ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಂತಹ ಕಾರ್ಯಕ್ರಮದಿಂದ ಸಂಸ್ಕೃತಿಯ ಬೆಳವಣಿಗೆ, ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಹಾಗೂ ಮನೋರಂಜನೆಗೆ ಸಹಕಾರಿಯಾಗುತ್ತದೆ ಎಂದರು.
ಮತ್ತೋರ್ವ ಅತಿಥಿ ಕೊಡವ ಸಮಾಜದ ಮಾಜಿ ಅಧ್ಯಕ್ಷ ಚೊಟ್ಟೆಯಾಂಡಮಾಡ ವಿಶ್ವನಾಥ್ ಅವರು ಮಾತನಾಡಿ ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ ಎಂದು ಹೇಳಿದರು.ವೇದಿಕೆಯಲ್ಲಿ ಟಿ. ಶೆಟ್ಟಿಗೇರಿ ಕೊಡವ ಸಮಾಜ ನಿರ್ದೇಶಕ ಬೊಳ್ಳೇರ ಅಪ್ಪುಟ ಪೊನ್ನಪ್ಪ, ಸಂಭ್ರಮ ಮಹಿಳಾ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ತಡಿಯಂಗಡ ಸೌಮ್ಯ ಕರುಂಬಯ್ಯ, ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೋಟ್ರಮಾಡ ರೇಷ್ಮಾ ಕಾರ್ಯಪ್ಪ ಹಾಜರಿದ್ದರು.ಚಂಗುಲಂಡ ಅಶ್ವಿನಿ ಸತೀಶ್ ಪ್ರಾರ್ಥಿಸಿ, ಸಮಾಜದ ಕಾರ್ಯದರ್ಶಿ ಕೋಟ್ರಮಾಡ ಸುಮಂತ್ ಮಾದಪ್ಪ ಸ್ವಾಗತಿಸಿ, ಸಮಾಜದ ಸಾಂಸ್ಕೃತಿಕ ಸಮಿತಿ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ಕಾರ್ಯಕ್ರಮ ನಿರ್ವಹಿಸಿ, ನಿರ್ದೇಶಕರಾದ ಬಾದುಮಂಡ ವಿಷ್ಣು ಕಾರ್ಯಪ್ಪ ವಂದಿಸಿದರು.ಸನ್ಮಾನ: ದಾನಿ ಅಜ್ಜಮಾಡ ಬಿ. ತಿಮ್ಮಯ್ಯ ದಂಪತಿ, ಪೌರ ಕಾರ್ಮಿಕ ಸುಂದರ ದಂಪತಿಗೆ ಸನ್ಮಾನಿಸಿ ಗೌರವಿಸಲಾಯಿತು.ಸಂಜೆ ಟಿ-ಶೆಟ್ಟಿಗೇರಿ ಸಂಭ್ರಮ ಸಾಂಸ್ಕೃತಿಕ ಮಹಿಳಾ ಸಂಘದಿಂದ ಮತ್ತು ಟಿ. ಶೆಟ್ಟಿಗೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.