ಅಯೋಧ್ಯೆಗೆ ತೆರಳಿದ ವಿಶೇಷ ಆಹ್ವಾನಿತರು

KannadaprabhaNewsNetwork |  
Published : Jan 22, 2024, 02:19 AM IST
ವಿಶೇಷ ಆಹ್ವಾನಿತರು | Kannada Prabha

ಸಾರಾಂಶ

ಕೆಎಲ್‌ಇ ಸಂಸ್ಥೆಯ ಚೇರಮನ್ ಪ್ರಭಾಕರ ಕೋರೆ, ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಅಧ್ಯಕ್ಷ ಡಾ. ಎಂ.ಆರ್ಿ. ರಾಮನಗೌಡರ, ಉದ್ಯಮಿ ಜಿತೇಂದ್ರ ಮಜೇಥಿಯಾ, ಸ್ವರ್ಣ ಸಮೂಹದ ಮಾಲೀಕ ಡಾ. ಚಿಗರುಪಾಟಿ ವಿ.ಎಸ್.ವಿ ಪ್ರಸಾದ ಅಯೋಧ್ಯೆಗೆ ತೆರಳಿದರು.

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ಜ. 22ರಂದು ನಡೆಯಲಿರುವ ರಾಮನ ಮೂರ್ತಿ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಎಂಟು ಮಂದಿ ವಿಶೇಷ ಆಹ್ವಾನಿತರು ವಿಶೇಷ ವಿಮಾನದ ಮೂಲಕ ಅಯೋಧ್ಯೆಗೆ ಪ್ರಯಾಣಿಸಿದರು.

ಕೆಎಲ್‌ಇ ಸಂಸ್ಥೆಯ ಚೇರಮನ್ ಪ್ರಭಾಕರ ಕೋರೆ, ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಅಧ್ಯಕ್ಷ ಡಾ. ಎಂ.ಆ‌ರ್. ರಾಮನಗೌಡರ, ಉದ್ಯಮಿ ಜಿತೇಂದ್ರ ಮಜೇಥಿಯಾ, ಸ್ವರ್ಣ ಸಮೂಹದ ಮಾಲೀಕ ಡಾ. ಚಿಗರುಪಾಟಿ ವಿ.ಎಸ್.ವಿ ಪ್ರಸಾದ ಅಯೋಧ್ಯೆಗೆ ತೆರಳಿದರು.

ಡಾ. ಪ್ರಭಾಕರ ಕೋರೆ ಮಾತನಾಡಿ, ರಾಮನ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಭಾಗವಹಿಸುತ್ತಿರುವುದು ನಮ್ಮ ಪಾಲಿಗೆ ನಿಜಕ್ಕೂ ಸಂತಸದ ವಿಚಾರ ಎಂದರು.

ಶಂಕ್ರಣ್ಣ ಮುನವಳ್ಳಿ ಮಾತನಾಡಿ, 3 ಸಾವಿರ ಆಹ್ವಾನಿತರಲ್ಲಿ ನಾವೂ ಇರುತ್ತೇವೆ ಎಂದು ಕನಸಲ್ಲಿ ಸಹ ಎಣಿಸಿರಲಿಲ್ಲ. ಭಗವಾನ್ ಶ್ರೀರಾಮ ಸಕಲರಿಗೂ ಒಳ್ಳೆಯದನ್ನು ಮಾಡಲಿ, ದೇಶ ಸುಭೀಕ್ಷದಿಂದ ಕೂಡಿರಲಿ ಎಂದರು.

ಡಾ. ವಿಎಸ್‌ವಿ ಪ್ರಸಾದ ಮಾತನಾಡಿ, ಕೋಟ್ಯಂತರ ಹಿಂದೂಗಳ ಐದುನೂರು ವರ್ಷಗಳ ಕನಸು ಈಗ ನನಸಾಗುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದೆ. ನನ್ನ ಪಾಲಿಗೆ ಪೂರ್ವಜನ್ಮದ ಪುಣ್ಯವೋ ಎನ್ನುವಂತಿದೆ. ಈ ಅವಕಾಶ ನಮಗೆ ದೊರೆತಿರುವುದು ನಿಜಕ್ಕೂ ಸೌಭಾಗ್ಯ ಎಂದು ಭಾವಿಸುವೆ. ಸರ್ವ ಜನಾಂಗದ ಜನತೆಯೂ ಕಳೆದ 15 ದಿನಗಳಿಂದ ರಾಮನ ಪ್ರತಿಷ್ಠಾಪನೆಯನ್ನು ಮನೆಯ ಕಾರ್ಯಕ್ರಮವೆಂಬಂತೆ ಆಚರಿಸುತ್ತಿದ್ದು, ಭಾರತ ವಿಶ್ವದಲ್ಲಿ ನಂ.1 ಆಗಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಉದ್ಯಮಿ ಜಿತೇಂದ್ರ ಮಜೇಥಿಯಾ, ನಾಳೆಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಜೀವನದ ಅತ್ಯಂತ ವಿಶೇಷ ಕ್ಷಣವಾಗಿದೆ ಎಂದು ಅಭಿಪ್ರಾಯಪಟ್ಟರು. ಎಲ್ಲ ಗಣ್ಯರ ಆಪ್ತರು, ಕುಟುಂಬ ವರ್ಗದವರು, ಹಿತೈಷಿಗಳು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ