ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ವಿಶೇಷ ಸಭೆ

KannadaprabhaNewsNetwork |  
Published : Mar 02, 2025, 01:20 AM IST
ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರುಗಳ ವಿಶೇಷ ಕಾರ್ಯಕ್ರಮದ ಉದ್ಘಾಟನೆಯನ್ನು  ಕೊಡಗು ಜಿಲ್ಲೆ ಜನಜಾಗೃತಿ ವೇದಿಕೆ ಸದಸ್ಯ  ಟಿ.ಎಂ ಅಯ್ಯಪ್ಪ  ನೆರವೇರಿಸಿದರು. | Kannada Prabha

ಸಾರಾಂಶ

ನವಜೀವನ ಸಮಿತಿಗಳನ್ನು ಅನುಪಾಲನೆ ಮಾಡುವಲ್ಲಿ ನವಜೀವನ ಪೋಷಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಪುರುಷೋತ್ತಮ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ನವಜೀವನ ಸಮಿತಿಗಳು ಮಡಿಕೇರಿ ತಾಲೂಕು ಇವರ ಸಹಯೋಗದಲ್ಲಿ 1855ನೇ ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ವಿಶೇಷ ಸಭೆಯನ್ನು ಮಡಿಕೇರಿ ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲೆ ಜನಜಾಗೃತಿ ವೇದಿಕೆ ಸದಸ್ಯ ಟಿ.ಎಂ ಅಯ್ಯಪ್ಪ ಇವರು ನೆರವೇರಿಸಿ ಮಾತನಾಡಿ, ಬೆಟ್ಟಗೇರಿ ವಲಯದ ಕಾರುಗುಂದ ಗೌಡ ಸಮಾಜದಲ್ಲಿ ಮದ್ಯವರ್ಜನ ಶಿಬಿರವು ಬಹಳ ಯಶಸ್ವಿಯಾಗಿ ನಡೆಯಿತು. ಈ ಶಿಬಿರದಿಂದ ಪಾನಮುಕ್ತರಾದ ತಾವು ಧನ್ಯರು ಎಂದರು.

ಪಾನಮುಕ್ತ ಸದಸ್ಯರು ಮತ್ತು ಮನೆಯ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ ಇವರು ಮಾತನಾಡಿ ನವಜೀವನ ಸಮಿತಿ ಸದಸ್ಯರ ಯೋಗಕ್ಷೇಮ ವಿಚಾರಿಸಿ ವಾರಕ್ಕೊಮ್ಮೆ ನಡೆಯುತ್ತಿರುವ ಸಮಿತಿಯ ವಾರದ ಸಭೆಗಳ ಕುರಿತು ಮಾಹಿತಿ ಪಡೆದುಕೊಂಡರು. ಪರಿಣಾಮಕಾರಿ ವಾರದ ಸಭೆಗಳ ಉದ್ದೇಶ ಮಹತ್ವ ಪ್ರಯೋಜನಗಳು ಮತ್ತು ಶತದಿನೋತ್ಸವ ಕಾರ್ಯಕ್ರಮ ಬಗ್ಗೆ ವಿವರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ಯೋಜನಾಧಿಕಾರಿ ಪುರುಷೋತ್ತಮ ಮಾತನಾಡಿ, ನವಜೀವನ ಸಮಿತಿಗಳನ್ನು ಅನುಪಾಲನೆ ಮಾಡುವಲ್ಲಿ ನವಜೀವನ ಪೋಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೇಲ್ವಿಚಾರಕರು, ಬೆಟ್ಟಗೇರಿ ವಲಯ ಹಾಗೂ ಪಾರ್ವತಿ ಒಕ್ಕೂಟದ ಅಧ್ಯಕ್ಷರು ಹಾಕತ್ತೂರು ವಿದ್ಯಾ ಬಿ.ಎಚ್, ಸೇವಾ ಪ್ರತಿನಿಧಿಗಳಾದ ಗೌರಮ್ಮ, ವಿಜಯಲಕ್ಷ್ಮಿ, ಭಾನುಮತಿ, ಪ್ರೇಮ, ಉಮಾಲಕ್ಷ್ಮಿ ಹಾಗೂ ನವಜೀವನ ಸಮಿತಿ ಸದಸ್ಯರು ಮತ್ತು ಅವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಉಮಾಲಕ್ಷ್ಮಿ ಸ್ವಾಗತಿಸಿ, ವಿದ್ಯಾ ಬಿ.ಹೆಚ್ ನಿರೂಪಿಸಿ, ವಂದಿಸಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ