ಬಸವೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

KannadaprabhaNewsNetwork |  
Published : May 01, 2025, 12:52 AM IST
ನುಗ್ಗೇಹಳ್ಳಿ ಗ್ರಾಮದ ವೀರಶೈವ ಸಮಾಜದ ವತಿಯಿಂದ ಬಸವ ಜಯಂತಿ ಅಂಗವಾಗಿ ನಡೆದ  ಬಸವೇಶ್ವರರ ಉತ್ಸವದಲ್ಲಿ  ಶಾಸಕ ಸಿಎನ್ ಬಾಲಕೃಷ್ಣರವರು ಪಾಲ್ಗೊಂಡು ಬಸವ ಜಯಂತಿಯ ಶುಭ ಕೋರಿದರು. | Kannada Prabha

ಸಾರಾಂಶ

ಜಗಜ್ಯೋತಿ ಬಸವೇಶ್ವರರ ಬಸವ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಬಸವ ಜಯಂತಿ ಪ್ರಯುಕ್ತ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಅಮರಲಿಂಗೇಶ್ವರ ಶ್ರೀ ಕಾಡುಬಸವೇಶ್ವರ ಸಂಕೋಲೆ ಬಸವೇಶ್ವರ ಹಾಗೂ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ನೂರಾರು ಭಕ್ತರು ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಕಾಡು ಬಸವೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಗ್ರಾಮದ ವೀರಶೈವ ಸಮಾಜದ ವತಿಯಿಂದ ಜಗಜ್ಯೋತಿ ಬಸವೇಶ್ವರರ ಬಸವ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಬಸವ ಜಯಂತಿ ಪ್ರಯುಕ್ತ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಅಮರಲಿಂಗೇಶ್ವರ ಶ್ರೀ ಕಾಡುಬಸವೇಶ್ವರ ಸಂಕೋಲೆ ಬಸವೇಶ್ವರ ಹಾಗೂ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ನೂರಾರು ಭಕ್ತರು ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಕಾಡು ಬಸವೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಉತ್ಸವ ನಡೆಸಲಾಯಿತು. ಶಾಸಕ ಬಾಲಕೃಷ್ಣರವರು ಉತ್ಸವದಲ್ಲಿ ಪಾಲ್ಗೊಂಡು ಬಸವೇಶ್ವರ ಜಯಂತಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ಇಡೀ ವಿಶ್ವವೇ ಬಸವೇಶ್ವರರ ವಚನ ಸಾಹಿತ್ಯ ಹಾಗೂ ಸಾಮಾಜಿಕ ಕಳಕಳಿಯ ಬಗ್ಗೆ ಇಂದಿಗೂ ಗೌರವ ಸಲ್ಲಿಸುತ್ತಿದೆ. ಅವರ ಸೈದ್ಧಾಂತಿಕ ಬದ್ಧತೆಗೆ ಇಂಗ್ಲೆಂಡ್ ನಲ್ಲಿ ಬಸವೇಶ್ವರರ ಪುತ್ಥಳಿ ನಿರ್ಮಾಣವಾಗಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ವೀರಶೈವ ಸಮಾಜದ ಯುವ ಮುಖಂಡ ಸಂತೇ ಶಿವರದ ಚಿರಂಜೀವಿ ತಾಲೂಕು ಟಿಎಪಿಎಂಎಸ್ ನಿರ್ದೇಶಕರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹೋಬಳಿ ವೀರಶೈವ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ದುಗ್ಗೇನಹಳ್ಳಿ ವೀರೇಶ್, ಟಿಎಪಿಎಂಎಸ್ ನಿರ್ದೇಶಕ ಚಿರಂಜೀವಿ, ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಎನ್ ಆರ್ ಕೃಪಾ ಶಂಕರ್ , ನಾಗರಿಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್, ಕೃಷಿ ಪತ್ತಿನ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್, ಹೋಬಳಿ ವೀರಶೈವ ಸಮಾಜದ ಅಧ್ಯಕ್ಷ ಎನ್ ಎಸ್ ಗಿರೀಶ್, ಖಜಾಂಚಿ ಪೊಲೀಸ್ ಕುಮಾರ್, ನಿರ್ದೇಶಕರಾದ ಜಯ ಕೀರ್ತಿ, ಉಮಾ ಶಂಕರ್, ರುದ್ರಸ್ವಾಮಿ, ಕುಮಾರಸ್ವಾಮಿ, ಎನ್‌ಸಿ ವಿಶ್ವನಾಥ್, ಎಂಸಿ ರೇಣುಕಸ್ವಾಮಿ, ತೇಜು, ಮಹೇಶ್, ಎನ್ ಆ9ರ್ ನಾಗರಾಜ್, ಪ್ರದೀಪ್ ಕುಮಾರ್, ಗಣೇಶ್, ಎನ್‌ಪಿ ಪ್ರದೀಪ್, ಎನ್‌ಪಿ ಆನಂದ್, ಲೋಕೇಶ್, ದೊಡ್ಡಗುಣಿ ವಿಜಯ್, ವಿರುಪಾಕ್ಷ, ಅಜಯ್ , ಭರತ್, ಹರೀಶ್, ಮಧು, ಮುಖಂಡರಾದ ಪೋಲಿಸ್ ನಾರಾಯಣಗೌಡ, ಶಂಕರ್, ಲಕ್ಷ್ಮಣ್, ಹೋಟೆಲ್ ರಾಜಣ್ಣ, ಮಹಮ್ಮದ್ ಜಾವಿದ್, ಪುಟ್ಟಸ್ವಾಮಿ, ಸೇರಿದಂತೆ ವೀರಶೈವ ಸಮಾಜದ ಪ್ರಮುಖರು ಹಾಗೂ ಗ್ರಾಮಸ್ಥರು ಹಾಜರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ