ಕನ್ನಡಪ್ರಭ ವಾರ್ತೆ ಕುಶಾಲನಗರ
ಸಂಜೆ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಏರ್ಪಡಿಸಲಾಗಿತ್ತು. ದೇವಾಲಯದ ಅರ್ಚಕರಾದ ರಾಧಾಕೃಷ್ಣ ಭಟ್ ನೇತೃತ್ವದ ತಂಡ ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಟ್ಟಿತು.ಆಂಜನೇಯ ಸೇವಾ ಸಮಿತಿಯ ಅಧ್ಯಕ್ಷ ವಿ.ಡಿ. ಪುಂಡರಿಕಾಕ್ಷ ರಾಮಾಂಜನೇಯ ಉತ್ಸವ ಸಮಿತಿ ಮತ್ತು ಟ್ರಸ್ಟ್ ಅಧ್ಯಕ್ಷ ವಿ.ಎಚ್. ಪ್ರಶಾಂತ್, ಕಾರ್ಯದರ್ಶಿ ನವನೀತ್ ಪೊನ್ನಟ್ಟಿ, ಸಹ ಕಾರ್ಯದರ್ಶಿ ವಿನು, ಖಜಾಂಚಿ ಪ್ರವೀಣ್ ಓಂಕಾರ್, ಸಂಚಾಲಕರಾದ ಕೆ.ಎನ್. ಚಂದ್ರಶೇಖರ್, ನಿರ್ದೇಶಕರು, ಸದಸ್ಯರು ಇದ್ದರು.
ಶೋಭಾ ಯಾತ್ರೆ:ಹನುಮ ಜಯಂತಿ ಅಂಗವಾಗಿ ದಶಮಂಟಪ ಸಮಿತಿ ನೇತೃತ್ವದಲ್ಲಿ ಎಂಟು ಮಂಟಪಗಳು ಕುಶಾಲನಗರ ಪಟ್ಟಣದಲ್ಲಿ ಸಂಜೆ ಐದನೇ ವರ್ಷದ ಶೋಭಾ ಯಾತ್ರೆ ನಡೆಸಿತು.
ದಶಮಂಟಪಗಳ ಸಮಿತಿ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಕಾರ್ಯದರ್ಶಿ ಕೆ.ಎನ್. ದೇವರಾಜ, ಖಜಾಂಚಿ ಡಿ.ಪಿ. ಗಿರೀಶ ಮತ್ತು ಪದಾಧಿಕಾರಿಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.
ಹನುಮ ಜಯಂತಿ ಶೋಭಯಾತ್ರೆ ಅಂಗವಾಗಿ ಕುಶಾಲನಗರ ಕಾರ್ ನಿಲ್ದಾಣದಲ್ಲಿ ಜೇಂಕರ್ ಆರ್ಕೆಸ್ಟ್ರಾ ಸಂಸ್ಥೆ ವತಿಯಿಂದ ಸಂಜೆ ವೇಳೆ ಮನರಂಜನಾ ಕಾರ್ಯಕ್ರಮ ನಡೆಯಿತು.