ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ

KannadaprabhaNewsNetwork |  
Published : Dec 14, 2024, 12:49 AM IST
13ಎಚ್ಎಸ್ಎನ್11ಎ : ಹನುಮಜಯಂತಿ ಅಂಗವಾಗಿ ನಡೆದ ಅನ್ನಸಂತರ್ಪಣೆ. | Kannada Prabha

ಸಾರಾಂಶ

ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶುಕ್ರವಾರ ಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾಸನ

ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶುಕ್ರವಾರ ಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಶುಕ್ರವಾರ ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, ೮ ಗಂಟೆಗೆ ಮಹಾಮಂಗಳಾರತಿ, ೯ಕ್ಕೆ ಮಾರುತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ ಇದಾದ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ೧೨:೩೦ಕ್ಕೆ ಸಾವಿರಾರು ಜನರಿಗೆ ಅನ್ನಸಂತರ್ಪಣೆ ನೆರವೇರಿಸಿದರು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.

ಇದೇ ವೇಳೆ ದೇವಾಲಯದ ಅರ್ಚಕರಾದ ರಕ್ಷಿತ್ ಭಾರಧ್ವಜ್ ಮಾರುತಿ ಜಯಂತಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರದ ಶ್ರೀ ನೀರುಬಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲೊಂದು ಮಹಾ ಸೈಬರ್‌ ಸುಲಿಗೆ : ರಾಜ್ಯದ ದೊಡ್ಡ ಡಿಜಿಟಲ್‌ ಅರೆಸ್ಟ್‌
ಅವಶ್ಯಕತೆ ಇದ್ದರೆ ರಾಜ್ಯಸಭೆಗೆ ಗೌಡರು ಹೋಗುವ ಬಗ್ಗೆ ಬಿಜೆಪಿ ತೀರ್ಮಾನಿಸುತ್ತೆ: ಎಚ್ಡಿಕೆ