ಪುಷ್ಪಗಿರಿ ಶಾಂತಮಲ್ಲಿಕಾರ್ಜುನ ದೇಗುಲದಲ್ಲಿ ಮಳೆಗೆ ವಿಶೇಷ ಪೂಜೆ

KannadaprabhaNewsNetwork |  
Published : Apr 20, 2024, 01:11 AM IST
ಪುಷ್ಪಗಿರಿಯ ಶ್ರೀ ಶಾಂತಮಲ್ಲಿಕಾರ್ಜುನ ದೇವಾಲಯದಲ್ಲಿ ಕೊಡಗು, ಹಾಸನ ಮಠಾಧಿಪತಿಗಳ ಪರಿಷತ್ತಿನ ಸ್ವಾಮೀಜಿಗಳು ಮಳೆಗಾಗಿ ವಿಶೇಷ ಪೂಜೆ | Kannada Prabha

ಸಾರಾಂಶ

ಪುಷ್ಪಗಿರಿ ಬೆಟ್ಟ ತಪ್ಪಲಲ್ಲಿ ಇರುವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿರಾಜಪೇಟೆ ಆರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ದೇವರಿಗೆ ರುದ್ರಾಭಿಷೇಕ, ಅಷ್ಟೋತ್ತರ, ಅರ್ಚನೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡಗು, ಹಾಸನ ಮಠಾಧಿಪತಿಗಳ ಪರಿಷತ್ತಿನ ಸ್ವಾಮೀಜಿಗಳು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕಿನ ಪುಷ್ಪಗಿರಿಯ ಶ್ರೀ ಶಾಂತಮಲ್ಲಿಕಾರ್ಜುನ ದೇವಾಲಯದಲ್ಲಿ ಕೊಡಗು, ಹಾಸನ ಮಠಾಧಿಪತಿಗಳ ಪರಿಷತ್ತಿನ ಸ್ವಾಮೀಜಿಗಳು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕಿನ ಪುಷ್ಪಗಿರಿ ಬೆಟ್ಟ ತಪ್ಪಲಲ್ಲಿ ಇರುವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿರಾಜಪೇಟೆ ಆರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ದೇವರಿಗೆ ರುದ್ರಾಭಿಷೇಕ, ಅಷ್ಟೋತ್ತರ, ಅರ್ಚನೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅರ್ಚಕರಾದ ನಂದೀಶ್ ಶಾಸ್ತ್ರಿ, ಮೋಹನಮೂರ್ತಿ ಶಾಸ್ತ್ರಿ ಹಾಗೂ ಸೋಮಶೇಖರ ಶಾಸ್ತ್ರಿಗಳಿಂದ ಪೂಜಾ ವಿಧಿವಿಧಾನಗಳು ನೆರವೇರಿದವು.

ನಂತರ ಮಾತನಾಡಿದ ಅರಮೇರಿ ಶ್ರೀಗಳು, ನೀರಿಲ್ಲದೆ ಭೂಮಿ ಬಿರಿಯುತ್ತಿದೆ. ನೀರಿಗಾಗಿ ಪಶು ಪಕ್ಷಿಗಳು ಚಡಪಡಿಸುತ್ತಿವೆ. ರೈತಾಪಿವರ್ಗ ತತ್ತರಿಸಿ ಹೋಗಿದ್ದಾರೆ. ಕಾವೇರಿ ಉಗಮ ಸ್ಥಾನ ಕೊಡಗಿನಲ್ಲಿಯೂ ಈ ಭಾರಿ ನದಿ, ಕೆರೆ ಕೆರೆಗಳೆಲ್ಲಾ ಬತ್ತಿ ಹೋಗಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ಭಾಗದ ಜನತೆಯ ಮನಸಿನಲ್ಲಿ ನೆಲೆನಿಂತಿರುವ, ಶಕ್ತಿವಂತ ದೇವಾಲಯ ಪುಷ್ಪಗಿರಿ ಶಾಂತಮಲ್ಲಿಕಾರ್ಜುನ ದೇವಾಲಯವಾಗಿದೆ. ಇಲ್ಲಿನ ಅಕ್ಕಪಕ್ಕದ ಜನರು, ರೈತಾಪಿ ವರ್ಗದವರು ಪ್ರತಿವರ್ಷ ಇಲ್ಲಿಗೆ ಆಗಮಿಸಿ ಬೆಟ್ಟಕ್ಕೆ ಹತ್ತಿ ಪೂಜೆ ಸಲ್ಲಿಸುವುದು ವಾಡಿಕೆ ಎಂದರು.

ಈ ಹಿನ್ನೆಲೆಯಲ್ಲಿ ಕೊಡಗು ಹಾಸನ ಮಠಾಧೀಶರ ಪರಿಷತ್ತು ವತಿಯಿಂದ ಸ್ವಾಮೀಜಿಗಳು ದೇವಾಲಯಕ್ಕೆ ಆಗಮಿಸಿ ಶಾಂತಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿ, ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದೇವೆ ಎಂದರು.

ಮಠಾಧಿಪತಿಗಳ ಪರಿಷತ್ತಿನ ಪ್ರದಾನ ಕಾರ್ಯದರ್ಶಿ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕಾರ್ಯದರ್ಶಿ ಕಿರಿಕೂಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಛಂಗಡಿ ಹಳ್ಳಿ ಮಠದ ಶ್ರೀ ಬಸವ ಮಹಾಂತ ಸ್ವಾಮೀಜಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್. ಮಹೇಶ್, ರಾಜ್ಯ ಸಂಚಾಲಕ ಎ.ಎಸ್.ಮಲ್ಲೇಶ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರಿಗೆ ಕಪಾಳಮೋಕ್ಷ: 27 ಜನರ ವಿರುದ್ಧ ಕೇಸ್‌
ಮಹಾಲಿಂಗಪುರದಲ್ಲಿ ಇಂದು ಜನುಮದ ಜೋಡಿ ಕಾರ್ಯಕ್ರಮ